Andolana originals

ಓದುಗರ ಪತ್ರ: ವೃತ್ತದಲ್ಲಿ ವಿದ್ಯುತ್ ದೀಪ, ನಾಮಫಲಕ ಅಳವಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, ಹುಣಸೂರು, ಗದ್ದಿಗೆ ಹಾಗೂ ಹಾಸನಕ್ಕೂ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ವೃತ್ತದಲ್ಲಿ ಯಾವುದೇ ನಾಮಫಲಕಗಳಾಗಲಿ, ಸೂಚನಾಫಲಕಗಳಾಗಲಿ ಇಲ್ಲದಿರುವುದು ಪ್ರಯಾಣಿಕರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಅಲ್ಲದೆ ಈ ವೃತ್ತ ಮೈಸೂರು-ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಸೂಚನಾಫಲಕಗಳಿಲ್ಲದಿರುವುದರಿಂದ ಇಲ್ಲಿ ಆಗಾಗ್ಗೆ ಅಪಘಾತಗಳಾಗುತ್ತಿವೆ. ಇನ್ನು ಈ ವೃತ್ತಕ್ಕೆ ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿಯ ವೇಳೆ ಈ ವೃತ್ತದ ಬಳಿ ಸಂಚರಿಸಲು ಕಷ್ಟವಾಗುತ್ತಿದೆ. ಅಲ್ಲದೆ ಈ ವೃತ್ತದ ಸಮೀಪದಲ್ಲಿಯೇ ಮದ್ಯದಂಗಡಿಯೂ ಇದ್ದು, ಕುಡಿದು ವಾಹನ ಚಲಾಯಿಸುವವರು ಏಕಾಏಕಿ ಮುಖ್ಯ ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ಈ ಸರ್ಕಲ್‌ಗೆ ವಿದ್ಯುತ್ ದೀಪಗಳನ್ನು ಅಳವಡಿಸುವ ಜತೆಗೆ ಸೂಚನಾಫಲಕಗಳನ್ನೂ ಅಳವಡಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago