ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು ಹಾಗೂ ಗದ್ದಿಗೆಗೆ ಸಂಪರ್ಕ ಕಲ್ಪಿಸುವ ವೃತ್ತವಾಗಿದ್ದು, ಜನರು ಎಚ್. ಡಿ. ಕೋಟೆಯಿಂದ ಮೈಸೂರು, ಹುಣಸೂರು, ಗದ್ದಿಗೆ ಹಾಗೂ ಹಾಸನಕ್ಕೂ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಂತಹ ವೃತ್ತದಲ್ಲಿ ಯಾವುದೇ ನಾಮಫಲಕಗಳಾಗಲಿ, ಸೂಚನಾಫಲಕಗಳಾಗಲಿ ಇಲ್ಲದಿರುವುದು ಪ್ರಯಾಣಿಕರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಅಲ್ಲದೆ ಈ ವೃತ್ತ ಮೈಸೂರು-ಮಾನಂದವಾಡಿ ಮುಖ್ಯರಸ್ತೆಗೆ ಸಂಪರ್ಕ ಹೊಂದಿದ್ದು, ಸೂಚನಾಫಲಕಗಳಿಲ್ಲದಿರುವುದರಿಂದ ಇಲ್ಲಿ ಆಗಾಗ್ಗೆ ಅಪಘಾತಗಳಾಗುತ್ತಿವೆ. ಇನ್ನು ಈ ವೃತ್ತಕ್ಕೆ ಸರಿಯಾದ ವಿದ್ಯುತ್ ದೀಪಗಳನ್ನು ಅಳವಡಿಸದಿರುವುದರಿಂದ ರಾತ್ರಿಯ ವೇಳೆ ಈ ವೃತ್ತದ ಬಳಿ ಸಂಚರಿಸಲು ಕಷ್ಟವಾಗುತ್ತಿದೆ. ಅಲ್ಲದೆ ಈ ವೃತ್ತದ ಸಮೀಪದಲ್ಲಿಯೇ ಮದ್ಯದಂಗಡಿಯೂ ಇದ್ದು, ಕುಡಿದು ವಾಹನ ಚಲಾಯಿಸುವವರು ಏಕಾಏಕಿ ಮುಖ್ಯ ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ಈ ಸರ್ಕಲ್ಗೆ ವಿದ್ಯುತ್ ದೀಪಗಳನ್ನು ಅಳವಡಿಸುವ ಜತೆಗೆ ಸೂಚನಾಫಲಕಗಳನ್ನೂ ಅಳವಡಿಸಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…