ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…