ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…