ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…