ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…