ಓದುಗರ ಪತ್ರ
ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ ವಾಹನಗಳಿಗೆ ಸಂತೆಪೇಟೆ ಒಳಗೆ ಪ್ರವೇಶಿಸಲು ಅವಕಾಶವಿದೆ.ಈ ಉತ್ತನಹಳ್ಳಿ ರಸ್ತೆಯು ಮುಂದುವರಿದಂತೆರಿಂಗ್ ರಸ್ತೆಗೆ ಸಂಪರ್ಕ ಕಲ್ಲಿಸುತ್ತದೆ. ಹೀಗಾಗಿ ಈ ರಸ್ತೆಯಲ್ಲಿ ಪ್ರತಿದಿನ ವಾಹನ ದಟ್ಟಣೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ.
ಉತ್ತನಹಳ್ಳಿಯ ಬಳಿ ಯುವ ದಸರಾ ಆಯೋಜನೆಗೊಳ್ಳುವುದರಿಂದ ಈ ವೇಳೆ ವಾಹನ ದಟ್ಟಣೆ ನಿರೀಕ್ಷೆಗಿಂತಲೂ ಹೆಚ್ಚಿರುತ್ತದೆ. ಈ ರಸ್ತೆಯಲ್ಲಿ ರಾತ್ರಿ ವೇಳೆ ಎದುರಿಗೆ ಬರುವ ವಾಹನಗಳ ಪ್ರಖರ ಬೆಳಕು ಕಣ್ಣು ಕುಕ್ಕುತ್ತದೆ. ಹೀಗಾಗಿ ವಾಹನ ಸವಾರರಿಗೆ ಮಾರ್ಗ ಸರಿಯಾಗಿ ಕಾಣದೆ ಗಲಿಬಿಲಿಗೊಳ್ಳುವ ಸಂದರ್ಭಗಳೇ ಹೆಚ್ಚು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ಎರಡೂ ಬದಿಯಲ್ಲಿ ಬೀದಿ ದೀಪ ಅಳವಡಿಸಿ, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕಿದೆ.
-ಎಂ.ಲಿಂಗರಾಜು, ಹೊಸಹುಂಡಿ, ಮೈಸೂರು ತಾ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…