Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

dgp murder case

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ ಎನ್ನುವಂತೆ ಪಠ್ಯ ಸೇರಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿ, ಪುಸ್ತಕವನ್ನು ವಾಪಸ್ ಪಡೆಯಲು ಎನ್‌ಸಿ ಇಆರ್‌ಟಿಗೆ ಆದೇಶ ನೀಡಿದೆ.

ಶಿಕ್ಷಣವು ಸಮಾಜ ಮತ್ತು ದೇಶವನ್ನು ಕಟ್ಟಲು ಹೊಸ ಪೀಳಿಗೆಯನ್ನು ರೂಪಿಸು ವಂತಾಗಬೇಕು. ವಿದ್ಯಾರ್ಥಿಗಳು ಕಲಿ ಯುವ ವಯಸ್ಸಿನಲ್ಲಿ ನ್ಯಾಯಾಂಗದ ವ್ಯವಸ್ಥೆಯ ಮೇಲೆಯೇ ಅನುಮಾನ ಪಡುವಂತಾದರೆ, ಇನ್ಯಾರನ್ನು ನಂಬಬೇಕು? ದೇಶದ ಬಗ್ಗೆ ಅಭಿಮಾನ ಬರುವುದಾದರೂ ಹೇಗೆ? ಇಂತಹ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಅನುಮಾನಿಸುವ ಬದಲು, ನಮ್ಮ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಮುಂದಿನ ದಿನಗಳಲ್ಲಿ ಸ್ವಲ್ಪಮಟ್ಟಿಗಾದರೂ ಭ್ರಷ್ಟಾಚಾರ ಕಡಿಮೆಯಾಗಬಹುದು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು

 

Tags:
error: Content is protected !!