ಓದುಗರ ಪತ್ರ
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ ಎನ್ನುವಂತೆ ಪಠ್ಯ ಸೇರಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿ, ಪುಸ್ತಕವನ್ನು ವಾಪಸ್ ಪಡೆಯಲು ಎನ್ಸಿ ಇಆರ್ಟಿಗೆ ಆದೇಶ ನೀಡಿದೆ.
ಶಿಕ್ಷಣವು ಸಮಾಜ ಮತ್ತು ದೇಶವನ್ನು ಕಟ್ಟಲು ಹೊಸ ಪೀಳಿಗೆಯನ್ನು ರೂಪಿಸು ವಂತಾಗಬೇಕು. ವಿದ್ಯಾರ್ಥಿಗಳು ಕಲಿ ಯುವ ವಯಸ್ಸಿನಲ್ಲಿ ನ್ಯಾಯಾಂಗದ ವ್ಯವಸ್ಥೆಯ ಮೇಲೆಯೇ ಅನುಮಾನ ಪಡುವಂತಾದರೆ, ಇನ್ಯಾರನ್ನು ನಂಬಬೇಕು? ದೇಶದ ಬಗ್ಗೆ ಅಭಿಮಾನ ಬರುವುದಾದರೂ ಹೇಗೆ? ಇಂತಹ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ನ ಈ ತೀರ್ಪು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಅನುಮಾನಿಸುವ ಬದಲು, ನಮ್ಮ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಿದರೆ ಮುಂದಿನ ದಿನಗಳಲ್ಲಿ ಸ್ವಲ್ಪಮಟ್ಟಿಗಾದರೂ ಭ್ರಷ್ಟಾಚಾರ ಕಡಿಮೆಯಾಗಬಹುದು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…