Andolana originals

ಓದುಗರ ಪತ್ರ| ರೈತನಿಗೆ ಅವಮಾನ ಮಾಡಿದ್ದು ಖಂಡನೀಯ

ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಮಾಲ್‌ವೊಂದರಲ್ಲಿ ರೈತರೊಬ್ಬರಿಗೆ ಮಾಲ್ ಒಳಗೆ ಪ್ರವೇಶ ನೀಡದೆ ಅಪಮಾನ ಮಾಡಿರುವುದಾಗಿ ವರದಿಯಾಗಿದೆ. ನಾಗರಾಜ್ ಎಂಬವರು ತಮ್ಮ ತಂದೆ ಫಕೀರಪ್ಪರನ್ನು ಮಾಲ್‌ನಲ್ಲಿಸಿನಿಮಾ ತೋರಿಸಲೆಂದು ಕರೆದುಕೊಂಡು ಬಂದಿದ್ದರು. ಆದರೆ, ಫಕೀರಪ್ಪ ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಮಾಲ್‌ನ ಸೆಕ್ಯೂರಿಟಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ್ದಾರೆ.

ಪಂಚ ಈ ನೆಲದ ಸಂಸ್ಕೃತಿ. ಇದನ್ನು ಗೌರವಿಸುವುದನ್ನು ಮಾಲ್‌ನಲ್ಲಿರುವವರು ಕಲಿಯಬೇಕು. ರೈತರಿಗೆ ಈ ರೀತಿ ಅಪಮಾನ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಮೆಟ್ರೋ ರೈಲು ಹತ್ತಲು ಬಂದಿದ್ದ ರೈತರನ್ನು ಸಿಬ್ಬಂದಿ ತಡೆದು ಅಪಮಾನ ಮಾಡಿದ್ದರು. ರೈತರಿಗೆ ಪದೇ ಪದೇ ಈ ರೀತಿ ಅವಮಾನ ಮಾಡುತ್ತಿರು ವುದು ಖಂಡನೀಯ. ಸದ್ಯ ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ಕಠಿಣ ಕ್ರಮವಹಿಸಿದ್ದು, 7 ದಿನಗಳ ಕಾಲ ಮಾಲ್‌ಅನ್ನು ಮಾಲ್‌ ಅನ್ನು ಬಂದ್ ಮಾಡಿಸಿರುವುದು ಸರಿಯಾದ ನಿರ್ಧಾರವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

3 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

4 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

10 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

10 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

10 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

10 hours ago