Andolana originals

ಓದುಗರ ಪತ್ರ| ರೈತನಿಗೆ ಅವಮಾನ ಮಾಡಿದ್ದು ಖಂಡನೀಯ

ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಮಾಲ್‌ವೊಂದರಲ್ಲಿ ರೈತರೊಬ್ಬರಿಗೆ ಮಾಲ್ ಒಳಗೆ ಪ್ರವೇಶ ನೀಡದೆ ಅಪಮಾನ ಮಾಡಿರುವುದಾಗಿ ವರದಿಯಾಗಿದೆ. ನಾಗರಾಜ್ ಎಂಬವರು ತಮ್ಮ ತಂದೆ ಫಕೀರಪ್ಪರನ್ನು ಮಾಲ್‌ನಲ್ಲಿಸಿನಿಮಾ ತೋರಿಸಲೆಂದು ಕರೆದುಕೊಂಡು ಬಂದಿದ್ದರು. ಆದರೆ, ಫಕೀರಪ್ಪ ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಮಾಲ್‌ನ ಸೆಕ್ಯೂರಿಟಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ್ದಾರೆ.

ಪಂಚ ಈ ನೆಲದ ಸಂಸ್ಕೃತಿ. ಇದನ್ನು ಗೌರವಿಸುವುದನ್ನು ಮಾಲ್‌ನಲ್ಲಿರುವವರು ಕಲಿಯಬೇಕು. ರೈತರಿಗೆ ಈ ರೀತಿ ಅಪಮಾನ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಮೆಟ್ರೋ ರೈಲು ಹತ್ತಲು ಬಂದಿದ್ದ ರೈತರನ್ನು ಸಿಬ್ಬಂದಿ ತಡೆದು ಅಪಮಾನ ಮಾಡಿದ್ದರು. ರೈತರಿಗೆ ಪದೇ ಪದೇ ಈ ರೀತಿ ಅವಮಾನ ಮಾಡುತ್ತಿರು ವುದು ಖಂಡನೀಯ. ಸದ್ಯ ರಾಜ್ಯ ಸರ್ಕಾರ ಈ ಪ್ರಕರಣದಲ್ಲಿ ಕಠಿಣ ಕ್ರಮವಹಿಸಿದ್ದು, 7 ದಿನಗಳ ಕಾಲ ಮಾಲ್‌ಅನ್ನು ಮಾಲ್‌ ಅನ್ನು ಬಂದ್ ಮಾಡಿಸಿರುವುದು ಸರಿಯಾದ ನಿರ್ಧಾರವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

59 mins ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

1 hour ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

5 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

6 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

6 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

6 hours ago