ಓದುಗರ ಪತ್ರ
ಪರಿಶಿಷ್ಟ ಜಾತಿಗಳಲ್ಲಿ ೧೦೧ ಉಪ ಜಾತಿಗಳು ನಮೂದಾಗಿದ್ದು, ಈ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ರಾಜ್ಯ ಸರ್ಕಾರದ ಕೈ ತಲುಪಿದ್ದು, ಸದ್ಯ,ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ.
ಒಳಮೀಸಲಾತಿಯನ್ನು ಅನುಷ್ಠಾನ ಗೊಳಿಸುವ ಬಗ್ಗೆ ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ಮತ್ತೆ ನಾಗಮೋಹನ್ ದಾಸ್ ಸಮಿತಿಗೆ ವಹಿಸಲಾಗಿದೆ. ಸಮೀಕ್ಷೆಯನ್ನು ೬೦ ದಿನಗಳೊಳಗೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಏತನ್ಮಧ್ಯೆ, ಇನ್ನೇನು ಕೆಲವೇ ತಿಂಗಳುಗಳಲ್ಲಿ ತಾಲ್ಲೂಕು,ಜಿಲ್ಲಾ ಪಂಚಾಯತ್ ಚುನಾವಣೆ, ತದನಂತರ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆ ಚುನಾವಣೆಗಳು ನಡೆಯಲಿವೆ. ಸರ್ಕಾರವು ಒಳ ಮೀಸಲಾತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಮೀನ ಮೇಷ ಎಣಿಸುತ್ತಾ ಇನ್ನಷ್ಟು ವಿಳಂಬ ನೀತಿ ಅನುಸರಿಸುವ ಸಾಧ್ಯತೆಯಿದೆ. ಈಗಾಗಲೇ ಕಳೆದ ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದೇ ಕಂಗಾಲಾಗಿ ವಯಸ್ಸು ಮೀರಿ ಅರ್ಹತೆ ಕಳೆದುಕೊಳ್ಳುವ ಭೀತಿಯಲ್ಲಿರುವ ಸರ್ಕಾರಿ ಹುದ್ದೆಗಳ ಕನಸು ಹೊತ್ತ ಲಕ್ಷಾಂತರ ಅಭ್ಯರ್ಥಿಗಳ ಪಾಡು ಹೇಳತೀರದಾಗಿದೆ.
ಆದ್ದರಿಂದ ನೆರೆಯ ತೆಲಂಗಾಣ ರಾಜ್ಯ ಒಳ ಮೀಸಲಾತಿ ಅನುಷ್ಠಾನ ದಲ್ಲಿ ಇಟ್ಟ ದಿಟ್ಟ ಹೆಜ್ಜೆಯನ್ನು ಕರ್ನಾಟಕ ಸರ್ಕಾರವೂ ಅನುಸರಿಸಲಿ.
– ಅನಿಲ್ ಕುಮಾರ್, ನಂಜನಗೂಡು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…