ಓದುಗರ ಪತ್ರ
ಪರಿಶಿಷ್ಟ ಜಾತಿಗಳಲ್ಲಿ ೧೦೧ ಉಪ ಜಾತಿಗಳು ನಮೂದಾಗಿದ್ದು, ಈ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ರಾಜ್ಯ ಸರ್ಕಾರದ ಕೈ ತಲುಪಿದ್ದು, ಸದ್ಯ,ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ.
ಒಳಮೀಸಲಾತಿಯನ್ನು ಅನುಷ್ಠಾನ ಗೊಳಿಸುವ ಬಗ್ಗೆ ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ಮತ್ತೆ ನಾಗಮೋಹನ್ ದಾಸ್ ಸಮಿತಿಗೆ ವಹಿಸಲಾಗಿದೆ. ಸಮೀಕ್ಷೆಯನ್ನು ೬೦ ದಿನಗಳೊಳಗೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಏತನ್ಮಧ್ಯೆ, ಇನ್ನೇನು ಕೆಲವೇ ತಿಂಗಳುಗಳಲ್ಲಿ ತಾಲ್ಲೂಕು,ಜಿಲ್ಲಾ ಪಂಚಾಯತ್ ಚುನಾವಣೆ, ತದನಂತರ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆ ಚುನಾವಣೆಗಳು ನಡೆಯಲಿವೆ. ಸರ್ಕಾರವು ಒಳ ಮೀಸಲಾತಿಯನ್ನು ಅನುಷ್ಠಾನಕ್ಕೆ ತರುವಲ್ಲಿ ಮೀನ ಮೇಷ ಎಣಿಸುತ್ತಾ ಇನ್ನಷ್ಟು ವಿಳಂಬ ನೀತಿ ಅನುಸರಿಸುವ ಸಾಧ್ಯತೆಯಿದೆ. ಈಗಾಗಲೇ ಕಳೆದ ಕೆಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದೇ ಕಂಗಾಲಾಗಿ ವಯಸ್ಸು ಮೀರಿ ಅರ್ಹತೆ ಕಳೆದುಕೊಳ್ಳುವ ಭೀತಿಯಲ್ಲಿರುವ ಸರ್ಕಾರಿ ಹುದ್ದೆಗಳ ಕನಸು ಹೊತ್ತ ಲಕ್ಷಾಂತರ ಅಭ್ಯರ್ಥಿಗಳ ಪಾಡು ಹೇಳತೀರದಾಗಿದೆ.
ಆದ್ದರಿಂದ ನೆರೆಯ ತೆಲಂಗಾಣ ರಾಜ್ಯ ಒಳ ಮೀಸಲಾತಿ ಅನುಷ್ಠಾನ ದಲ್ಲಿ ಇಟ್ಟ ದಿಟ್ಟ ಹೆಜ್ಜೆಯನ್ನು ಕರ್ನಾಟಕ ಸರ್ಕಾರವೂ ಅನುಸರಿಸಲಿ.
– ಅನಿಲ್ ಕುಮಾರ್, ನಂಜನಗೂಡು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…