Andolana originals

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಇದು ಬ್ಲಾಕ್‌ಮೇಲ್ ಹಂತಕ್ಕೆ ತಲುಪಿದೆ. ಇದರಿಂದ ಮಕ್ಕಳು ಹಾಗೂ ಪೋಷಕರು ಉಪಾಧ್ಯಾಯರ ಹತ್ತಿರವಾಗಲೀ ಪ್ರಾಂಶುಪಾಲರ ಹತ್ತಿರವಾಗಲೀ ಯಾವುದೇ ತೊಂದರೆ ಇದ್ದರೂ ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಕಾರಣ ಇಷ್ಟೆ, ಎಲ್ಲಿ ನೋಟೆಡ್ ಆಗಿ ಬಿಡುತ್ತೇವೋ, ನನ್ನ ಮಗನಿಗೆ/ಮಗಳಿಗೆ ಅಂಕಗಳನ್ನು ಕೊಡುವುದಿಲ್ಲವೋ ಎಂಬ ಭಯ. ಇದಕ್ಕೆ ತಕ್ಕಂತೆ ಮಕ್ಕಳು ಕೂಡ ಹೆದರಿಕೆಯಿಂದಲೇ ಪಾಠ ಕೇಳುವ ಮನಸ್ಥಿತಿ, ಪರಿಸ್ಥಿತಿ ಎದುರಾಗಿದೆ.

ವಿಶ್ವವಿದ್ಯಾಲಯಗಳಲ್ಲಂತೂ ಪ್ರತಿ ವಿಷಯಕ್ಕೆ ೨೦ ಆಂತರಿಕ ಅಂಕಗಳಿದ್ದರೂ ಬಹುತೇಕ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ನೀಡುವುದು ಗರಿಷ್ಟ೧೩ರಿಂದ ೧೪ ಅಂಕಗಳು ಕನಿಷ್ಠ ೮ರಿಂದ ೯ ಅಂಕಗಳು ಮಾತ್ರ. ಉಳಿದ ವಿಷಯಗಳಲ್ಲಿ ಅದರಲ್ಲೂ ಭಾಷಾ ವಿಷಯದಲ್ಲಿ ೮೦ ಅಂಕಗಳಿಗೆ ೬೦ ಅಂಕಗಳು ದೊರೆತರೇ ಹೆಚ್ಚು. ಇದರಿಂದಾಗಿ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ತಾವು ಹೇಳಿದಂತೆ ಕೇಳದ ವಿದ್ಯಾರ್ಥಿನಿಯರಿಗೆ ಆಂತರಿಕ ಅಂಕ ಕಡಿಮೆ ನೀಡಿ ಅವರನ್ನು ಅನುತ್ತೀರ್ಣಗೊಳಿಸಿ ಸೇಡು ತೀರಿಸಿಕೊಳ್ಳುವ ಪ್ರವೃತ್ತಿ ಹಲವಾರು ವರ್ಷಗಳಿಂದ ನಡೆಯುತ್ತಿದ್ದರೂ ಸಂಬಂಧಪಟ್ಟವರು ಕಂಡೂ ಕಾಣದಂತಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು, ವಿಶ್ವವಿದ್ಯಾಲಯದವರು ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಇಂಟರ್ನಲ್ಸ್ ಅಂಕ ಪದ್ಧತಿಯನ್ನು ರದ್ದುಪಡಿಸುವ ಮೂಲಕ ವಿದ್ಯಾರ್ಥಿಗಳ ಹಿತ ಕಾಪಾಡುವುದು ಅಗತ್ಯ.

– ಡಾ. ಎಂ.ಪಿ.ಪ್ರೀತಮ್, ಕುವೆಂಪುನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

4 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

4 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

4 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

4 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

7 hours ago