Andolana originals

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಇದು ಬ್ಲಾಕ್‌ಮೇಲ್ ಹಂತಕ್ಕೆ ತಲುಪಿದೆ. ಇದರಿಂದ ಮಕ್ಕಳು ಹಾಗೂ ಪೋಷಕರು ಉಪಾಧ್ಯಾಯರ ಹತ್ತಿರವಾಗಲೀ ಪ್ರಾಂಶುಪಾಲರ ಹತ್ತಿರವಾಗಲೀ ಯಾವುದೇ ತೊಂದರೆ ಇದ್ದರೂ ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಕಾರಣ ಇಷ್ಟೆ, ಎಲ್ಲಿ ನೋಟೆಡ್ ಆಗಿ ಬಿಡುತ್ತೇವೋ, ನನ್ನ ಮಗನಿಗೆ/ಮಗಳಿಗೆ ಅಂಕಗಳನ್ನು ಕೊಡುವುದಿಲ್ಲವೋ ಎಂಬ ಭಯ. ಇದಕ್ಕೆ ತಕ್ಕಂತೆ ಮಕ್ಕಳು ಕೂಡ ಹೆದರಿಕೆಯಿಂದಲೇ ಪಾಠ ಕೇಳುವ ಮನಸ್ಥಿತಿ, ಪರಿಸ್ಥಿತಿ ಎದುರಾಗಿದೆ.

ವಿಶ್ವವಿದ್ಯಾಲಯಗಳಲ್ಲಂತೂ ಪ್ರತಿ ವಿಷಯಕ್ಕೆ ೨೦ ಆಂತರಿಕ ಅಂಕಗಳಿದ್ದರೂ ಬಹುತೇಕ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ನೀಡುವುದು ಗರಿಷ್ಟ೧೩ರಿಂದ ೧೪ ಅಂಕಗಳು ಕನಿಷ್ಠ ೮ರಿಂದ ೯ ಅಂಕಗಳು ಮಾತ್ರ. ಉಳಿದ ವಿಷಯಗಳಲ್ಲಿ ಅದರಲ್ಲೂ ಭಾಷಾ ವಿಷಯದಲ್ಲಿ ೮೦ ಅಂಕಗಳಿಗೆ ೬೦ ಅಂಕಗಳು ದೊರೆತರೇ ಹೆಚ್ಚು. ಇದರಿಂದಾಗಿ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ತಾವು ಹೇಳಿದಂತೆ ಕೇಳದ ವಿದ್ಯಾರ್ಥಿನಿಯರಿಗೆ ಆಂತರಿಕ ಅಂಕ ಕಡಿಮೆ ನೀಡಿ ಅವರನ್ನು ಅನುತ್ತೀರ್ಣಗೊಳಿಸಿ ಸೇಡು ತೀರಿಸಿಕೊಳ್ಳುವ ಪ್ರವೃತ್ತಿ ಹಲವಾರು ವರ್ಷಗಳಿಂದ ನಡೆಯುತ್ತಿದ್ದರೂ ಸಂಬಂಧಪಟ್ಟವರು ಕಂಡೂ ಕಾಣದಂತಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು, ವಿಶ್ವವಿದ್ಯಾಲಯದವರು ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಇಂಟರ್ನಲ್ಸ್ ಅಂಕ ಪದ್ಧತಿಯನ್ನು ರದ್ದುಪಡಿಸುವ ಮೂಲಕ ವಿದ್ಯಾರ್ಥಿಗಳ ಹಿತ ಕಾಪಾಡುವುದು ಅಗತ್ಯ.

– ಡಾ. ಎಂ.ಪಿ.ಪ್ರೀತಮ್, ಕುವೆಂಪುನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

12 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

12 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

12 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

14 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

14 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

22 hours ago