ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇ.ಡಿ. ಅಧಿಕಾರಿಗಳ ವರದಿಯಲ್ಲಿ ಈ ಪ್ರಕರಣದ ಪ್ರಮುಖ ಆರೋಪಿ ನಾಗೇಂದ್ರ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಅಲ್ಲದೆ ಅವರ ಅದೇಶದಂತೆಯೇ ಹಣಕಾಸಿನ ವ್ಯವಹಾರ ನಡೆದಿರುವುದೂ ಬೆಳಕಿಗೆ ಬಂದಿದೆ. ಆದರೆ ಎಸ್ಐಟಿ ಅಧಿಕಾರಿಗಳು ನಾಗೇಂದ್ರ ಅವರ ಹೆಸರನ್ನೇ ಕೈಬಿಟ್ಟು ವರದಿ ಸಿದ್ಧಪಡಿಸಿರುವುದನ್ನು ನೋಡಿದರೆ ಉದ್ದೇಶ ಪೂರ್ವಕವಾಗಿಯೇ ನಾಗೇಂದ್ರ ಅವರಿಗೆ ರಕ್ಷಣೆ ನೀಡಲಾಗುತ್ತಿದೆಯೇನೋ ಎಂಬ ಅನುಮಾನ ಕಾಡುತ್ತದೆ.
ಒಂದು ವೇಳೆ ಈ ಹಗರಣದಲ್ಲಿ ನಾಗೇಂದ್ರರವರು ಭಾಗಿಯಾಗಿಲ್ಲ ಎನ್ನುವುದಾದರೆ ಅವರಿಂದ ರಾಜೀನಾಮೆ ಪಡೆದ್ದಿದ್ದಾರೂ ಏಕೆ? ಆದ್ದರಿಂದ ಸರ್ಕಾರ ಪಾರದರ್ಶಕವಾಗಿ ಈ ಪ್ರಕರಣದ ತನಿಖೆ ಮಾಡಬೇಕಿದೆ.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…