ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಎಸ್ ಐಟಿ ಹಾಗೂ ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇ.ಡಿ. ಅಧಿಕಾರಿಗಳ ತನಿಖಾ ವರದಿಯಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರೆ, ಎಸ್ಐಟಿ ಅಧಿಕಾರಿಗಳ ವರದಿಯಲ್ಲಿ ಅವರ ಹೆಸರೇ ಇಲ್ಲದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇ.ಡಿ. ಅಧಿಕಾರಿಗಳ ವರದಿಯಲ್ಲಿ ಈ ಪ್ರಕರಣದ ಪ್ರಮುಖ ಆರೋಪಿ ನಾಗೇಂದ್ರ ಎಂಬುದು ಸ್ಪಷ್ಟವಾಗಿ ದಾಖಲಾಗಿದೆ. ಅಲ್ಲದೆ ಅವರ ಅದೇಶದಂತೆಯೇ ಹಣಕಾಸಿನ ವ್ಯವಹಾರ ನಡೆದಿರುವುದೂ ಬೆಳಕಿಗೆ ಬಂದಿದೆ. ಆದರೆ ಎಸ್ಐಟಿ ಅಧಿಕಾರಿಗಳು ನಾಗೇಂದ್ರ ಅವರ ಹೆಸರನ್ನೇ ಕೈಬಿಟ್ಟು ವರದಿ ಸಿದ್ಧಪಡಿಸಿರುವುದನ್ನು ನೋಡಿದರೆ ಉದ್ದೇಶ ಪೂರ್ವಕವಾಗಿಯೇ ನಾಗೇಂದ್ರ ಅವರಿಗೆ ರಕ್ಷಣೆ ನೀಡಲಾಗುತ್ತಿದೆಯೇನೋ ಎಂಬ ಅನುಮಾನ ಕಾಡುತ್ತದೆ.
ಒಂದು ವೇಳೆ ಈ ಹಗರಣದಲ್ಲಿ ನಾಗೇಂದ್ರರವರು ಭಾಗಿಯಾಗಿಲ್ಲ ಎನ್ನುವುದಾದರೆ ಅವರಿಂದ ರಾಜೀನಾಮೆ ಪಡೆದ್ದಿದ್ದಾರೂ ಏಕೆ? ಆದ್ದರಿಂದ ಸರ್ಕಾರ ಪಾರದರ್ಶಕವಾಗಿ ಈ ಪ್ರಕರಣದ ತನಿಖೆ ಮಾಡಬೇಕಿದೆ.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…