Andolana originals

ಓದುಗರ ಪತ್ರ: ದಸರಾ ಪಾಸ್ ವಿತರಣೆ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ

ಈ ಬಾರಿಯ ದಸರಾ ಮಹೋತ್ಸವ ಯಾವುದೇ ಅಡೆತಡೆ ಇಲ್ಲದೇ ನಡೆದಿದೆ. ಆದರೆ ಪಾಸ್ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳು ಹಾಗೂ ಜಾಲತಾಣ ಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಹಣ ಕೊಟ್ಟು ಪಾಸ್ ಪಡೆದ ಅನೇಕರಿಗೆ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಅವಕಾಶ ಸಿಕ್ಕಿಲ್ಲ.

ಇದರಿಂದಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಜಿಲ್ಲಾಡಳಿತವು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು, ಪಾಸ್ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿ ರೂಪಿಸಬೇಕಾಗಿದೆ.

-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

5 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

9 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago