Andolana originals

ಓದುಗರ ಪತ್ರ:  ಬನ್ನಿಮಂಟಪದಲ್ಲಿ ಬಸ್ ನಿಲ್ದಾಣ ನಿರ್ಮಾಣ ಔಚಿತ್ಯವೇ?

ಮೈಸೂರಿನ ಬನ್ನಿಮಂಟಪ ಬಸ್ ಡಿಪೋ ಜಾಗದಲ್ಲಿ ಸುಸಜ್ಜಿತ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಶೀಘ್ರವೇ ನೆರವೇರಲಿದೆ ಎಂದು ಪತ್ರಿಕೆಗಳಲ್ಲಿ ಸುದ್ದಿಯಾಗಿದೆ. ಈ ಸ್ಥಳದಲ್ಲಿ ಬಸ್ ನಿಲ್ದಾಣ ನಿರ್ಮಿಸುವ ಔಚಿತ್ಯವಾದರೂ ಏನು? ಈಗಾಗಲೇ ಮೈಸೂರಿನಲ್ಲಿ ರೈಲ್ವೆ ನಿಲ್ದಾಣ, ನಗರ ಬಸ್ ನಿಲ್ದಾಣ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳು ಬೇರೆ ಬೇರೆ ಸ್ಥಳದಲ್ಲಿವೆ. ಪ್ರಯಾಣಿಕರು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಹೋಗಲು ಬಸ್ ಇಲ್ಲವೇ ಬೇರೆ ಸಾರಿಗೆ ಮೂಲಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ.ಸರ್ಕಾರ ಇರುವುದು ಸಾರ್ವಜನಿಕ ಸೇವೆಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ. ಹಾಗಾಗಿ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗಿರಬೇಕೇ ಹೊರತು ಅನನುಕೂಲವಾಗಬಾರದು.ಈಗಿರುವ ಗ್ರಾಮಾಂತರ ಬಸ್ ನಿಲ್ದಾಣದ ಎದುರಿರುವ ಪೀಪಲ್ಸ್ ಪಾರ್ಕ್ ಜಾಗದಲ್ಲೇ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬಹುದು. ಇದರಿಂದ ಪ್ರಯಾಣಿಕರಿಗೆ ಅನಗತ್ಯ ಸುತ್ತಾಟ ತಪ್ಪುತ್ತದೆ. ಅದಾಗದಿದ್ದರೆ ರೈಲ್ವೆ ನಿಲ್ದಾಣದ ಎದುರು ಇರುವ ಜೆ.ಕೆ. ಮೈದಾನದಲ್ಲಿ ನಿರ್ಮಿಸಬಹುದು.

ಇದನ್ನೂ ಓದಿ: https://andolana.in/districts/chamarajanagar/death-of-five-tigers-case-dcf-y-chakrapani-suspended/

ನಗರ ಬಸ್ ನಿಲ್ದಾಣವನ್ನೂ ನಿರ್ಮಿಸಿದರೆ ಮೂರೂ ನಿಲ್ದಾಣಗಳು ಒಂದೇ ಕಡೆ ಇದ್ದು, ಪ್ರಯಾಣಿಕರಿಗೆ ಬಹಳ ಅನುಕೂಲವೇ ಆಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಯೋಚಿಸಿ ಕ್ರಮವಹಿಸುವುದು ಅಗತ್ಯ.

– ಬಿ.ಎನ್.ಸಿದ್ದುಪ್ರಸನ್ನ, ಬೆಳವಾಡಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

2 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago