Andolana originals

ಓದುಗರ ಪತ್ರ:  ಬನ್ನಿಮಂಟಪದಲ್ಲಿ ಬಸ್ ನಿಲ್ದಾಣ ನಿರ್ಮಾಣ ಔಚಿತ್ಯವೇ?

ಮೈಸೂರಿನ ಬನ್ನಿಮಂಟಪ ಬಸ್ ಡಿಪೋ ಜಾಗದಲ್ಲಿ ಸುಸಜ್ಜಿತ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಶೀಘ್ರವೇ ನೆರವೇರಲಿದೆ ಎಂದು ಪತ್ರಿಕೆಗಳಲ್ಲಿ ಸುದ್ದಿಯಾಗಿದೆ. ಈ ಸ್ಥಳದಲ್ಲಿ ಬಸ್ ನಿಲ್ದಾಣ ನಿರ್ಮಿಸುವ ಔಚಿತ್ಯವಾದರೂ ಏನು? ಈಗಾಗಲೇ ಮೈಸೂರಿನಲ್ಲಿ ರೈಲ್ವೆ ನಿಲ್ದಾಣ, ನಗರ ಬಸ್ ನಿಲ್ದಾಣ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳು ಬೇರೆ ಬೇರೆ ಸ್ಥಳದಲ್ಲಿವೆ. ಪ್ರಯಾಣಿಕರು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಹೋಗಲು ಬಸ್ ಇಲ್ಲವೇ ಬೇರೆ ಸಾರಿಗೆ ಮೂಲಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ.ಸರ್ಕಾರ ಇರುವುದು ಸಾರ್ವಜನಿಕ ಸೇವೆಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ. ಹಾಗಾಗಿ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗಿರಬೇಕೇ ಹೊರತು ಅನನುಕೂಲವಾಗಬಾರದು.ಈಗಿರುವ ಗ್ರಾಮಾಂತರ ಬಸ್ ನಿಲ್ದಾಣದ ಎದುರಿರುವ ಪೀಪಲ್ಸ್ ಪಾರ್ಕ್ ಜಾಗದಲ್ಲೇ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬಹುದು. ಇದರಿಂದ ಪ್ರಯಾಣಿಕರಿಗೆ ಅನಗತ್ಯ ಸುತ್ತಾಟ ತಪ್ಪುತ್ತದೆ. ಅದಾಗದಿದ್ದರೆ ರೈಲ್ವೆ ನಿಲ್ದಾಣದ ಎದುರು ಇರುವ ಜೆ.ಕೆ. ಮೈದಾನದಲ್ಲಿ ನಿರ್ಮಿಸಬಹುದು.

ಇದನ್ನೂ ಓದಿ: https://andolana.in/districts/chamarajanagar/death-of-five-tigers-case-dcf-y-chakrapani-suspended/

ನಗರ ಬಸ್ ನಿಲ್ದಾಣವನ್ನೂ ನಿರ್ಮಿಸಿದರೆ ಮೂರೂ ನಿಲ್ದಾಣಗಳು ಒಂದೇ ಕಡೆ ಇದ್ದು, ಪ್ರಯಾಣಿಕರಿಗೆ ಬಹಳ ಅನುಕೂಲವೇ ಆಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಯೋಚಿಸಿ ಕ್ರಮವಹಿಸುವುದು ಅಗತ್ಯ.

– ಬಿ.ಎನ್.ಸಿದ್ದುಪ್ರಸನ್ನ, ಬೆಳವಾಡಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago