Andolana originals

ಓದುಗರ ಪತ್ರ:  ಬನ್ನಿಮಂಟಪದಲ್ಲಿ ಬಸ್ ನಿಲ್ದಾಣ ನಿರ್ಮಾಣ ಔಚಿತ್ಯವೇ?

ಮೈಸೂರಿನ ಬನ್ನಿಮಂಟಪ ಬಸ್ ಡಿಪೋ ಜಾಗದಲ್ಲಿ ಸುಸಜ್ಜಿತ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ಶೀಘ್ರವೇ ನೆರವೇರಲಿದೆ ಎಂದು ಪತ್ರಿಕೆಗಳಲ್ಲಿ ಸುದ್ದಿಯಾಗಿದೆ. ಈ ಸ್ಥಳದಲ್ಲಿ ಬಸ್ ನಿಲ್ದಾಣ ನಿರ್ಮಿಸುವ ಔಚಿತ್ಯವಾದರೂ ಏನು? ಈಗಾಗಲೇ ಮೈಸೂರಿನಲ್ಲಿ ರೈಲ್ವೆ ನಿಲ್ದಾಣ, ನಗರ ಬಸ್ ನಿಲ್ದಾಣ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳು ಬೇರೆ ಬೇರೆ ಸ್ಥಳದಲ್ಲಿವೆ. ಪ್ರಯಾಣಿಕರು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಹೋಗಲು ಬಸ್ ಇಲ್ಲವೇ ಬೇರೆ ಸಾರಿಗೆ ಮೂಲಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ.ಸರ್ಕಾರ ಇರುವುದು ಸಾರ್ವಜನಿಕ ಸೇವೆಗಾಗಿಯೇ ಹೊರತು ಮತ್ಯಾವುದಕ್ಕೂ ಅಲ್ಲ. ಹಾಗಾಗಿ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗಿರಬೇಕೇ ಹೊರತು ಅನನುಕೂಲವಾಗಬಾರದು.ಈಗಿರುವ ಗ್ರಾಮಾಂತರ ಬಸ್ ನಿಲ್ದಾಣದ ಎದುರಿರುವ ಪೀಪಲ್ಸ್ ಪಾರ್ಕ್ ಜಾಗದಲ್ಲೇ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬಹುದು. ಇದರಿಂದ ಪ್ರಯಾಣಿಕರಿಗೆ ಅನಗತ್ಯ ಸುತ್ತಾಟ ತಪ್ಪುತ್ತದೆ. ಅದಾಗದಿದ್ದರೆ ರೈಲ್ವೆ ನಿಲ್ದಾಣದ ಎದುರು ಇರುವ ಜೆ.ಕೆ. ಮೈದಾನದಲ್ಲಿ ನಿರ್ಮಿಸಬಹುದು.

ಇದನ್ನೂ ಓದಿ: https://andolana.in/districts/chamarajanagar/death-of-five-tigers-case-dcf-y-chakrapani-suspended/

ನಗರ ಬಸ್ ನಿಲ್ದಾಣವನ್ನೂ ನಿರ್ಮಿಸಿದರೆ ಮೂರೂ ನಿಲ್ದಾಣಗಳು ಒಂದೇ ಕಡೆ ಇದ್ದು, ಪ್ರಯಾಣಿಕರಿಗೆ ಬಹಳ ಅನುಕೂಲವೇ ಆಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಯೋಚಿಸಿ ಕ್ರಮವಹಿಸುವುದು ಅಗತ್ಯ.

– ಬಿ.ಎನ್.ಸಿದ್ದುಪ್ರಸನ್ನ, ಬೆಳವಾಡಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

12 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

43 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

54 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

2 hours ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago