Andolana originals

ಓದುಗರ ಪತ್ರ| ಪ್ರಶ್ನೆಗಳ ಆಕ್ಷೇಪಣೆಗೆ ಶುಲ್ಕ ವಿಧಿಸುವುದು ಸರಿಯೇ?

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ ಮಾಡಿಸಿದ್ದು, ಯಾವುದೇ ಗೂಗಲ್ ಅಥವಾ ಎಐ ತಂತ್ರಜ್ಞಾನ ಬಳಸಿ ಭಾಷಾಂತರ ಮಾಡಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದರೂ ಪ್ರತಿ ಪಶ್ನೆಗೆ 50 ರೂ.ಗಳ ಶುಲ್ಕ ಪಾವತಿಸಬೇಕಿದೆ. ಆಯೋಗ ಮಾಡಿದ ತಪ್ಪಿಗೆ ಆಕ್ಷೇಪಣೆ ಸಲ್ಲಿಸುವ ಪ್ರಶ್ನೆಗಳ ಬಗ್ಗೆ ಆಕ್ಷೇಪ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ವಿಧಿಸುವುದು ಯಾವ ನ್ಯಾಯ?

ಅನೇಕ ಬಡ ಅಭ್ಯರ್ಥಿಗಳು ಹಣವನ್ನು ಕೂಡಿಟ್ಟು ದೂರದ ಊರು ಗಳಲ್ಲಿ ವಾಸ್ತವ್ಯ ಹೂಡಿ ಕೋಚಿಂಗ್ ಸೆಂಟರ್‌ಗಳನ್ನು ಸೇರಿ ತರಬೇತಿ ಪಡೆದು ಪರೀಕ್ಷೆ ಬರೆದಿರುತ್ತಾರೆ. ಈಗ ಆಯೋಗ ಮಾಡಿದ ತಪ್ಪಿಗೆ ಈ ಅಭ್ಯರ್ಥಿಗಳು ಮತ್ತೆ ಶುಲ್ಕ ಪಾವತಿಸಬೇಕು ಎಂದರೆ ಹಣ ಎಲ್ಲಿಂದ ತರುವುದು? ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸಲು ವಿಧಿಸಿರುವ ಶುಲ್ಕವನ್ನು ತೆಗೆದುಹಾಕಬೇಕು.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

6 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

10 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

10 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

10 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

10 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

11 hours ago