ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ ಮಾಡಿಸಿದ್ದು, ಯಾವುದೇ ಗೂಗಲ್ ಅಥವಾ ಎಐ ತಂತ್ರಜ್ಞಾನ ಬಳಸಿ ಭಾಷಾಂತರ ಮಾಡಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದರೂ ಪ್ರತಿ ಪಶ್ನೆಗೆ 50 ರೂ.ಗಳ ಶುಲ್ಕ ಪಾವತಿಸಬೇಕಿದೆ. ಆಯೋಗ ಮಾಡಿದ ತಪ್ಪಿಗೆ ಆಕ್ಷೇಪಣೆ ಸಲ್ಲಿಸುವ ಪ್ರಶ್ನೆಗಳ ಬಗ್ಗೆ ಆಕ್ಷೇಪ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ವಿಧಿಸುವುದು ಯಾವ ನ್ಯಾಯ?
ಅನೇಕ ಬಡ ಅಭ್ಯರ್ಥಿಗಳು ಹಣವನ್ನು ಕೂಡಿಟ್ಟು ದೂರದ ಊರು ಗಳಲ್ಲಿ ವಾಸ್ತವ್ಯ ಹೂಡಿ ಕೋಚಿಂಗ್ ಸೆಂಟರ್ಗಳನ್ನು ಸೇರಿ ತರಬೇತಿ ಪಡೆದು ಪರೀಕ್ಷೆ ಬರೆದಿರುತ್ತಾರೆ. ಈಗ ಆಯೋಗ ಮಾಡಿದ ತಪ್ಪಿಗೆ ಈ ಅಭ್ಯರ್ಥಿಗಳು ಮತ್ತೆ ಶುಲ್ಕ ಪಾವತಿಸಬೇಕು ಎಂದರೆ ಹಣ ಎಲ್ಲಿಂದ ತರುವುದು? ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸಲು ವಿಧಿಸಿರುವ ಶುಲ್ಕವನ್ನು ತೆಗೆದುಹಾಕಬೇಕು.
-ಬಿ.ಟಿ.ಅಂಬಿಕಾ, ಹಾಸನ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…