Andolana originals

ಓದುಗರ ಪತ್ರ| ಪ್ರಶ್ನೆಗಳ ಆಕ್ಷೇಪಣೆಗೆ ಶುಲ್ಕ ವಿಧಿಸುವುದು ಸರಿಯೇ?

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ ಮಾಡಿಸಿದ್ದು, ಯಾವುದೇ ಗೂಗಲ್ ಅಥವಾ ಎಐ ತಂತ್ರಜ್ಞಾನ ಬಳಸಿ ಭಾಷಾಂತರ ಮಾಡಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದರೂ ಪ್ರತಿ ಪಶ್ನೆಗೆ 50 ರೂ.ಗಳ ಶುಲ್ಕ ಪಾವತಿಸಬೇಕಿದೆ. ಆಯೋಗ ಮಾಡಿದ ತಪ್ಪಿಗೆ ಆಕ್ಷೇಪಣೆ ಸಲ್ಲಿಸುವ ಪ್ರಶ್ನೆಗಳ ಬಗ್ಗೆ ಆಕ್ಷೇಪ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ವಿಧಿಸುವುದು ಯಾವ ನ್ಯಾಯ?

ಅನೇಕ ಬಡ ಅಭ್ಯರ್ಥಿಗಳು ಹಣವನ್ನು ಕೂಡಿಟ್ಟು ದೂರದ ಊರು ಗಳಲ್ಲಿ ವಾಸ್ತವ್ಯ ಹೂಡಿ ಕೋಚಿಂಗ್ ಸೆಂಟರ್‌ಗಳನ್ನು ಸೇರಿ ತರಬೇತಿ ಪಡೆದು ಪರೀಕ್ಷೆ ಬರೆದಿರುತ್ತಾರೆ. ಈಗ ಆಯೋಗ ಮಾಡಿದ ತಪ್ಪಿಗೆ ಈ ಅಭ್ಯರ್ಥಿಗಳು ಮತ್ತೆ ಶುಲ್ಕ ಪಾವತಿಸಬೇಕು ಎಂದರೆ ಹಣ ಎಲ್ಲಿಂದ ತರುವುದು? ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸಲು ವಿಧಿಸಿರುವ ಶುಲ್ಕವನ್ನು ತೆಗೆದುಹಾಕಬೇಕು.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago