Andolana originals

ಓದುಗರ ಪತ್ರ| ಪ್ರಶ್ನೆಗಳ ಆಕ್ಷೇಪಣೆಗೆ ಶುಲ್ಕ ವಿಧಿಸುವುದು ಸರಿಯೇ?

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ ಮಾಡಿಸಿದ್ದು, ಯಾವುದೇ ಗೂಗಲ್ ಅಥವಾ ಎಐ ತಂತ್ರಜ್ಞಾನ ಬಳಸಿ ಭಾಷಾಂತರ ಮಾಡಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದರೂ ಪ್ರತಿ ಪಶ್ನೆಗೆ 50 ರೂ.ಗಳ ಶುಲ್ಕ ಪಾವತಿಸಬೇಕಿದೆ. ಆಯೋಗ ಮಾಡಿದ ತಪ್ಪಿಗೆ ಆಕ್ಷೇಪಣೆ ಸಲ್ಲಿಸುವ ಪ್ರಶ್ನೆಗಳ ಬಗ್ಗೆ ಆಕ್ಷೇಪ ಸಲ್ಲಿಸುವ ಅಭ್ಯರ್ಥಿಗಳಿಗೆ ಶುಲ್ಕ ವಿಧಿಸುವುದು ಯಾವ ನ್ಯಾಯ?

ಅನೇಕ ಬಡ ಅಭ್ಯರ್ಥಿಗಳು ಹಣವನ್ನು ಕೂಡಿಟ್ಟು ದೂರದ ಊರು ಗಳಲ್ಲಿ ವಾಸ್ತವ್ಯ ಹೂಡಿ ಕೋಚಿಂಗ್ ಸೆಂಟರ್‌ಗಳನ್ನು ಸೇರಿ ತರಬೇತಿ ಪಡೆದು ಪರೀಕ್ಷೆ ಬರೆದಿರುತ್ತಾರೆ. ಈಗ ಆಯೋಗ ಮಾಡಿದ ತಪ್ಪಿಗೆ ಈ ಅಭ್ಯರ್ಥಿಗಳು ಮತ್ತೆ ಶುಲ್ಕ ಪಾವತಿಸಬೇಕು ಎಂದರೆ ಹಣ ಎಲ್ಲಿಂದ ತರುವುದು? ಆದ್ದರಿಂದ ಕರ್ನಾಟಕ ಲೋಕಸೇವಾ ಆಯೋಗವು ಆಕ್ಷೇಪಣೆ ಸಲ್ಲಿಸಲು ವಿಧಿಸಿರುವ ಶುಲ್ಕವನ್ನು ತೆಗೆದುಹಾಕಬೇಕು.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

47 mins ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

59 mins ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

6 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

7 hours ago