ಓದುಗರ ಪತ್ರ
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು ಹೆಚ್ಚು ರಜೆ ತೆಗೆದುಕೊಳ್ಳುತ್ತಾರೆ ಎಂಬ ತಪ್ಪು ಕಲ್ಪನೆಗೆ ಬದಲು, ಅವರ ಕೌಶಲ ಮತ್ತು ನಿಷ್ಠೆಯನ್ನು ಗುರುತಿಸುವ ಮನಸ್ಥಿತಿಯನ್ನು ಬೆಳೆಸಬೇಕು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜತೆಯಾಗಿ ಈ ನೀತಿಯ ನಿಜವಾದ ಉದ್ದೇಶವನ್ನು ಸ್ಪಷ್ಟವಾಗಿ ಸಾರಬೇಕು.
ಇದನ್ನು ‘ವಿಶ್ರಾಂತಿಯ ಹಕ್ಕು’ ಎಂದಲ್ಲ, ‘ಗೌರವದ ಹಕ್ಕು’ ಎಂದು ಪರಿಗಣಿಸುವ ಸಂವೇದನೆ ಅಗತ್ಯ. ಕಾರ್ಯಸ್ಥಳದಲ್ಲಿ ನಂಬಿಕೆ ಮತ್ತು ಸಹಕಾರದ ವಾತಾವರಣವಿದ್ದರೆ ಮಾತ್ರ ಈ ನೀತಿ ಯಶಸ್ವಿಯಾಗಲಿದೆ. ಋತುಚಕ್ರ ರಜೆಕೇವಲ ರಜೆ ನೀಡುವ ಕ್ರಮವಲ್ಲ; ಅದು ಮಹಿಳೆಯರ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನದಲ್ಲಿ ಸಮತೋಲನ ಸಾಧಿಸಲು ತೆಗೆದುಕೊಳ್ಳಲಾದ ಪ್ರಗತಿಪರ ಹೆಜ್ಜೆ. ನಮ್ಮ ಸಮಾಜ ಹೆಚ್ಚು ಸಂವೇದನಾಶೀಲ ಮತ್ತು ಗೌರವಪೂರ್ಣವಾಗಲಿ.
-ಡಾ. ಎಚ್ .ಕೆ . ವಿಜಯಕುಮಾರ್, ಬೆಂಗಳೂರು
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…