ಓದುಗರ ಪತ್ರ
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು ಹೆಚ್ಚು ರಜೆ ತೆಗೆದುಕೊಳ್ಳುತ್ತಾರೆ ಎಂಬ ತಪ್ಪು ಕಲ್ಪನೆಗೆ ಬದಲು, ಅವರ ಕೌಶಲ ಮತ್ತು ನಿಷ್ಠೆಯನ್ನು ಗುರುತಿಸುವ ಮನಸ್ಥಿತಿಯನ್ನು ಬೆಳೆಸಬೇಕು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜತೆಯಾಗಿ ಈ ನೀತಿಯ ನಿಜವಾದ ಉದ್ದೇಶವನ್ನು ಸ್ಪಷ್ಟವಾಗಿ ಸಾರಬೇಕು.
ಇದನ್ನು ‘ವಿಶ್ರಾಂತಿಯ ಹಕ್ಕು’ ಎಂದಲ್ಲ, ‘ಗೌರವದ ಹಕ್ಕು’ ಎಂದು ಪರಿಗಣಿಸುವ ಸಂವೇದನೆ ಅಗತ್ಯ. ಕಾರ್ಯಸ್ಥಳದಲ್ಲಿ ನಂಬಿಕೆ ಮತ್ತು ಸಹಕಾರದ ವಾತಾವರಣವಿದ್ದರೆ ಮಾತ್ರ ಈ ನೀತಿ ಯಶಸ್ವಿಯಾಗಲಿದೆ. ಋತುಚಕ್ರ ರಜೆಕೇವಲ ರಜೆ ನೀಡುವ ಕ್ರಮವಲ್ಲ; ಅದು ಮಹಿಳೆಯರ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನದಲ್ಲಿ ಸಮತೋಲನ ಸಾಧಿಸಲು ತೆಗೆದುಕೊಳ್ಳಲಾದ ಪ್ರಗತಿಪರ ಹೆಜ್ಜೆ. ನಮ್ಮ ಸಮಾಜ ಹೆಚ್ಚು ಸಂವೇದನಾಶೀಲ ಮತ್ತು ಗೌರವಪೂರ್ಣವಾಗಲಿ.
-ಡಾ. ಎಚ್ .ಕೆ . ವಿಜಯಕುಮಾರ್, ಬೆಂಗಳೂರು
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…