ಓದುಗರ ಪತ್ರ
ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು ಹೆಚ್ಚು ರಜೆ ತೆಗೆದುಕೊಳ್ಳುತ್ತಾರೆ ಎಂಬ ತಪ್ಪು ಕಲ್ಪನೆಗೆ ಬದಲು, ಅವರ ಕೌಶಲ ಮತ್ತು ನಿಷ್ಠೆಯನ್ನು ಗುರುತಿಸುವ ಮನಸ್ಥಿತಿಯನ್ನು ಬೆಳೆಸಬೇಕು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜತೆಯಾಗಿ ಈ ನೀತಿಯ ನಿಜವಾದ ಉದ್ದೇಶವನ್ನು ಸ್ಪಷ್ಟವಾಗಿ ಸಾರಬೇಕು.
ಇದನ್ನು ‘ವಿಶ್ರಾಂತಿಯ ಹಕ್ಕು’ ಎಂದಲ್ಲ, ‘ಗೌರವದ ಹಕ್ಕು’ ಎಂದು ಪರಿಗಣಿಸುವ ಸಂವೇದನೆ ಅಗತ್ಯ. ಕಾರ್ಯಸ್ಥಳದಲ್ಲಿ ನಂಬಿಕೆ ಮತ್ತು ಸಹಕಾರದ ವಾತಾವರಣವಿದ್ದರೆ ಮಾತ್ರ ಈ ನೀತಿ ಯಶಸ್ವಿಯಾಗಲಿದೆ. ಋತುಚಕ್ರ ರಜೆಕೇವಲ ರಜೆ ನೀಡುವ ಕ್ರಮವಲ್ಲ; ಅದು ಮಹಿಳೆಯರ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನದಲ್ಲಿ ಸಮತೋಲನ ಸಾಧಿಸಲು ತೆಗೆದುಕೊಳ್ಳಲಾದ ಪ್ರಗತಿಪರ ಹೆಜ್ಜೆ. ನಮ್ಮ ಸಮಾಜ ಹೆಚ್ಚು ಸಂವೇದನಾಶೀಲ ಮತ್ತು ಗೌರವಪೂರ್ಣವಾಗಲಿ.
-ಡಾ. ಎಚ್ .ಕೆ . ವಿಜಯಕುಮಾರ್, ಬೆಂಗಳೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…