Andolana originals

ಓದುಗರ ಪತ್ರ: ಋತುಚಕ್ರ ರಜೆ ಗೌರವ ಸೂಚಕವೋ, ಲಿಂಗಭೇದದ ಎಚ್ಚರಿಕೆಯೋ?

ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು ಹೆಚ್ಚು ರಜೆ ತೆಗೆದುಕೊಳ್ಳುತ್ತಾರೆ ಎಂಬ ತಪ್ಪು ಕಲ್ಪನೆಗೆ ಬದಲು, ಅವರ ಕೌಶಲ ಮತ್ತು ನಿಷ್ಠೆಯನ್ನು ಗುರುತಿಸುವ ಮನಸ್ಥಿತಿಯನ್ನು ಬೆಳೆಸಬೇಕು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜತೆಯಾಗಿ ಈ ನೀತಿಯ ನಿಜವಾದ ಉದ್ದೇಶವನ್ನು ಸ್ಪಷ್ಟವಾಗಿ ಸಾರಬೇಕು.

ಇದನ್ನು ‘ವಿಶ್ರಾಂತಿಯ ಹಕ್ಕು’ ಎಂದಲ್ಲ, ‘ಗೌರವದ ಹಕ್ಕು’ ಎಂದು ಪರಿಗಣಿಸುವ ಸಂವೇದನೆ ಅಗತ್ಯ. ಕಾರ್ಯಸ್ಥಳದಲ್ಲಿ ನಂಬಿಕೆ ಮತ್ತು ಸಹಕಾರದ ವಾತಾವರಣವಿದ್ದರೆ ಮಾತ್ರ ಈ ನೀತಿ ಯಶಸ್ವಿಯಾಗಲಿದೆ. ಋತುಚಕ್ರ ರಜೆಕೇವಲ ರಜೆ ನೀಡುವ ಕ್ರಮವಲ್ಲ; ಅದು ಮಹಿಳೆಯರ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನದಲ್ಲಿ ಸಮತೋಲನ ಸಾಧಿಸಲು ತೆಗೆದುಕೊಳ್ಳಲಾದ ಪ್ರಗತಿಪರ ಹೆಜ್ಜೆ. ನಮ್ಮ ಸಮಾಜ ಹೆಚ್ಚು ಸಂವೇದನಾಶೀಲ ಮತ್ತು ಗೌರವಪೂರ್ಣವಾಗಲಿ.

-ಡಾ. ಎಚ್ .ಕೆ . ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago