Andolana originals

ಓದುಗರ ಪತ್ರ: ಋತುಚಕ್ರ ರಜೆ ಗೌರವ ಸೂಚಕವೋ, ಲಿಂಗಭೇದದ ಎಚ್ಚರಿಕೆಯೋ?

ರಾಜ್ಯ ಸರ್ಕಾರ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನೀತಿಯಿಂದಾಗಿ ಕೆಲವು ಉದ್ಯಮಗಳು ಮಹಿಳೆಯರನ್ನು ನೇಮಿ ಸುವಲ್ಲಿ ಹಿಂಜರಿಯಬಹುದು ಎಂಬ ಆತಂಕವಿದೆ. ಮಹಿಳೆಯರು ಹೆಚ್ಚು ರಜೆ ತೆಗೆದುಕೊಳ್ಳುತ್ತಾರೆ ಎಂಬ ತಪ್ಪು ಕಲ್ಪನೆಗೆ ಬದಲು, ಅವರ ಕೌಶಲ ಮತ್ತು ನಿಷ್ಠೆಯನ್ನು ಗುರುತಿಸುವ ಮನಸ್ಥಿತಿಯನ್ನು ಬೆಳೆಸಬೇಕು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜತೆಯಾಗಿ ಈ ನೀತಿಯ ನಿಜವಾದ ಉದ್ದೇಶವನ್ನು ಸ್ಪಷ್ಟವಾಗಿ ಸಾರಬೇಕು.

ಇದನ್ನು ‘ವಿಶ್ರಾಂತಿಯ ಹಕ್ಕು’ ಎಂದಲ್ಲ, ‘ಗೌರವದ ಹಕ್ಕು’ ಎಂದು ಪರಿಗಣಿಸುವ ಸಂವೇದನೆ ಅಗತ್ಯ. ಕಾರ್ಯಸ್ಥಳದಲ್ಲಿ ನಂಬಿಕೆ ಮತ್ತು ಸಹಕಾರದ ವಾತಾವರಣವಿದ್ದರೆ ಮಾತ್ರ ಈ ನೀತಿ ಯಶಸ್ವಿಯಾಗಲಿದೆ. ಋತುಚಕ್ರ ರಜೆಕೇವಲ ರಜೆ ನೀಡುವ ಕ್ರಮವಲ್ಲ; ಅದು ಮಹಿಳೆಯರ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನದಲ್ಲಿ ಸಮತೋಲನ ಸಾಧಿಸಲು ತೆಗೆದುಕೊಳ್ಳಲಾದ ಪ್ರಗತಿಪರ ಹೆಜ್ಜೆ. ನಮ್ಮ ಸಮಾಜ ಹೆಚ್ಚು ಸಂವೇದನಾಶೀಲ ಮತ್ತು ಗೌರವಪೂರ್ಣವಾಗಲಿ.

-ಡಾ. ಎಚ್ .ಕೆ . ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

8 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago