Andolana originals

ಓದುಗರ ಪತ್ರ| ರಾಜಕಾರಣವೆಂದರೆ ಪರಸ್ಪರ ನಿಂದಿಸಿಕೊಳ್ಳುವುದೇ?

ರಾಜಕೀಯ ಮೌಲ್ಯಗಳೊಂದಿಗೆ ಎಂದೂ ರಾಜಿ ಮಾಡಿಕೊಳ್ಳದೆ, ಜನ ಸೇವೆಯೇ ಜನಾರ್ಧನ ಸೇವೆ ಎಂದು ಜನರ ಸೇವಕನಂತೆ ಕೆಲಸ ಮಾಡುವುದೇ ರಾಜಕೀಯ ಎಂಬುದನ್ನು ಇಂದಿನ ರಾಜಕಾರಣಿಗಳು ಮರೆತಂತಿದೆ.

ಜನಪ್ರತಿನಿಧಿಯಾಗಿ ಆಯ್ಕೆ ಯಾದವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸ ಬೇಕು. ಪ್ರತಿಯೊಬ್ಬರ ಸಮಸ್ಯೆ ಗಳನ್ನೂ ಆಲಿಸಿ ಅವುಗಳಿಗೆ ಸ್ಪಂದಿಸಬೇಕು.

ಆದರೆ, ಇತ್ತೀಚೆಗೆ ರಾಜಕಾರಣ ಎಂದರೆ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಪರಸ್ಪರ ನಿಂದಿಸುವುದು, ಆರೋಪಗಳನ್ನು ಮಾಡುವುದು ಎಂಬಂತಾಗಿದೆ. ಈಗಿನ ರಾಜಕಾರಣಿಗಳಂತೂ ಜನರನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆದು ಆಳಲು ಮುಂದಾಗಿದ್ದು, ಸಮಾಜದ ನೆಮ್ಮದಿಗೆ ಭಂಗವುಂಟು ಮಾಡುತ್ತಿದ್ದಾರೆ. ಅಲ್ಲದೆ ಪ್ರತಿಯೊಂದು ವಿಚಾರಕ್ಕೂ ವೈಯಕ್ತಿಕ ವಿಚಾರಗಳನ್ನು ಹಿಡಿದು ಅವರ ಬಗ್ಗೆ ಅವಹೇಳನ ಮಾಡುವುದೇ ರಾಜಕಾರಣಿಗಳ ಕೆಲಸವೇನೋ ಎಂಬಂತೆ ವರ್ತಿಸುತ್ತಿದ್ದಾರೆ.

ಆದ್ದರಿಂದ ರಾಜಕಾರಣಿಗಳಾದವರು ಪರಸ್ಪರ ನಿಂದಿಸಿಕೊಳ್ಳುವುದನ್ನು ಬಿಟ್ಟು ಜನಸೇವೆ ಮಾಡಲು, ನೊಂದವರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago