Andolana originals

ಓದುಗರ ಪತ್ರ| ರಾಜಕಾರಣವೆಂದರೆ ಪರಸ್ಪರ ನಿಂದಿಸಿಕೊಳ್ಳುವುದೇ?

ರಾಜಕೀಯ ಮೌಲ್ಯಗಳೊಂದಿಗೆ ಎಂದೂ ರಾಜಿ ಮಾಡಿಕೊಳ್ಳದೆ, ಜನ ಸೇವೆಯೇ ಜನಾರ್ಧನ ಸೇವೆ ಎಂದು ಜನರ ಸೇವಕನಂತೆ ಕೆಲಸ ಮಾಡುವುದೇ ರಾಜಕೀಯ ಎಂಬುದನ್ನು ಇಂದಿನ ರಾಜಕಾರಣಿಗಳು ಮರೆತಂತಿದೆ.

ಜನಪ್ರತಿನಿಧಿಯಾಗಿ ಆಯ್ಕೆ ಯಾದವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸ ಬೇಕು. ಪ್ರತಿಯೊಬ್ಬರ ಸಮಸ್ಯೆ ಗಳನ್ನೂ ಆಲಿಸಿ ಅವುಗಳಿಗೆ ಸ್ಪಂದಿಸಬೇಕು.

ಆದರೆ, ಇತ್ತೀಚೆಗೆ ರಾಜಕಾರಣ ಎಂದರೆ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಪರಸ್ಪರ ನಿಂದಿಸುವುದು, ಆರೋಪಗಳನ್ನು ಮಾಡುವುದು ಎಂಬಂತಾಗಿದೆ. ಈಗಿನ ರಾಜಕಾರಣಿಗಳಂತೂ ಜನರನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆದು ಆಳಲು ಮುಂದಾಗಿದ್ದು, ಸಮಾಜದ ನೆಮ್ಮದಿಗೆ ಭಂಗವುಂಟು ಮಾಡುತ್ತಿದ್ದಾರೆ. ಅಲ್ಲದೆ ಪ್ರತಿಯೊಂದು ವಿಚಾರಕ್ಕೂ ವೈಯಕ್ತಿಕ ವಿಚಾರಗಳನ್ನು ಹಿಡಿದು ಅವರ ಬಗ್ಗೆ ಅವಹೇಳನ ಮಾಡುವುದೇ ರಾಜಕಾರಣಿಗಳ ಕೆಲಸವೇನೋ ಎಂಬಂತೆ ವರ್ತಿಸುತ್ತಿದ್ದಾರೆ.

ಆದ್ದರಿಂದ ರಾಜಕಾರಣಿಗಳಾದವರು ಪರಸ್ಪರ ನಿಂದಿಸಿಕೊಳ್ಳುವುದನ್ನು ಬಿಟ್ಟು ಜನಸೇವೆ ಮಾಡಲು, ನೊಂದವರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago