Andolana originals

ಓದುಗರ ಪತ್ರ: ಸತಿ-ಪತಿಯ ಸಂಬಂಧ ಎತ್ತ ಸಾಗುತ್ತಿದೆ?

ಇತ್ತೀಚಿನ ದಿನಗಳಲ್ಲಿ ಸತಿ-ಪತಿ ಸಂಬಂಧ ವಿಚ್ಛೇದನದಲ್ಲಿ ಕೊನೆಯಾಗುತ್ತಿರುವುದು ಮಾಮೂಲಿ ಎನ್ನುವಂತಾಗಿದೆ. ಅನೈತಿಕ ಸಂಬಂಧಗಳಿಂದ  ಬೇರೆ ಆಗುತ್ತಿರುವ ಹಲವು ಪ್ರಕರಣಗಳು ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ.

ಸತಿ-ಪತಿಗಳೆಂದರೆ ಜೀವನದ ಸಂಸಾರ ಬಂಡಿಯಲ್ಲಿರುವ ಎರಡು ಗಾಲಿಗಳಂತೆಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ಬಂಡಿಯಲ್ಲಿ ಒಂದು ಗಾಲಿ ಮುರಿದರೂ ಜೀವನ ಎಂಬ ಸಂಸಾರದ ಬಂಡಿ ಹಾದಿ ತಪ್ಪುತ್ತದೆ. ಪ್ರಪಂಚದಲ್ಲಿ ಎಲ್ಲಕ್ಕಿಂತ ದೊಡ್ಡ ಸಂಬಂಧ ಅಂದರೆ ಅದು ಸತಿ-ಪತಿ ಸಂಬಂಧ. ಅಂತಹ ಸಂಬಂಧವನ್ನು ಇತ್ತೀಚಿನ ದಿನಗಳಲ್ಲಿ ವಾಕ್ ಸ್ವಾತಂತ್ರ್ಯದ ನೆಪವೊಡ್ಡಿ ಅರ್ಥ ಹೀನ ಮಾಡುತ್ತಿರುವುದು ಅವಿವೇಕಿತನ.

ವರದಕ್ಷಿಣೆ ಕಿರುಕುಳ, ಅಕ್ರಮ ಸಂಬಂಧದಿಂದ ಹೆಂಡತಿ ಆತ್ಮಹತ್ಯೆ, ಪ್ರಿಯಕರನಿಗಾಗಿ ಗಂಡ ಮಕ್ಕಳ ಹತ್ಯೆಗೆ ಸಂಚು, ಅಕ್ರಮ ಸಂಬಂಧಕ್ಕೆಬೇಸತ್ತು ಹೆಂಡತಿಯ ರುಂಡವನ್ನು ಬೇರ್ಪಡಿಸಿದ ಪತಿ, ಪ್ರಿಯಕರನ ಜತೆ ಓಡಿ ಹೋದ ಪತ್ನಿ ಇಂತಹ ವಿಚಾರಗಳಿಂದ ಸತಿ-ಪತಿ ಸಂಬಂಧ ಹದಗೆಟ್ಟು ಈ ಸಂಬಂಧಗಳಿಗೆ ಅರ್ಥವೇ ಇಲ್ಲದಂತಾಗಿದೆ. ಸತಿ-ಪತಿಗಳು ಈ ವಿಷಯವಾಗಿ ವಿಚಾರ ಮಾಡಿ ಅನ್ಯೋನ್ಯತೆಯಿಂದ ಬಾಳುವ ಮೂಲಕ ಪವಿತ್ರ ಬಾಂಧವ್ಯವನ್ನು ಕಾಪಾಡಬೇಕಾಗಿದೆ.

ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

11 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

11 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

11 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

12 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

12 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

12 hours ago