Andolana originals

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ. ಆದರೆ ಈ ವರ್ಷ ದಿಢೀರ್ ಅಂತ ಕಂಬಳ ಸೇರ್ಪಡೆಗೊಳಿಸಿರುವುದು ಅಚ್ಚರಿ ಜೊತೆಗೆ ವಿವಾದಕ್ಕೂ ಕಾರಣವಾಗಿದೆ. ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದು ಸರಿಯಲ್ಲ. ಅದು ಕರಾವಳಿ ಭಾಗದ ಸಂಸ್ಕೃತಿ. ಅದಕ್ಕೆ ಅಗತ್ಯವಾದ ವಾತಾವರಣವನ್ನು ಮೈಸೂರಿನಲ್ಲಿ ಸಿದ್ಧಮಾಡಿಕೊಂಡು ಆಯೋಜಿಸಬೇಕೆಂಬ ಹಂಬಲ ಏಕೆ ಬಂದಿದೆ ಎಂಬುದೇ ಹಲವರ ಪ್ರಶ್ನೆಯಾಗಿದೆ.

ಕಂಬಳ ಆಯೋಜನೆಗೆ ಸಿದ್ಧತೆಯ ನೆಪದಲ್ಲಿ ಕಾನೂನು ಉಲ್ಲಂಸಿ ಮರಗಳನ್ನು ಕಡಿದು ಪರಿಸರ ನಾಶ ಮಾಡಲಾಗುತ್ತಿದೆ ಎಂಬುದು ಪರಿಸರ ವಾದಿಗಳು ಹಾಗೂ ಇತರೆ ಸಂಘ ಸಂಸ್ಥಗಳ ಆಕ್ರೋಶ, ಆರೋಪ. ರಾಜ್ಯದ ಹಲವೆಡೆ ಬರ ಆತಂಕದಲ್ಲಿ ರೈತರು ತಲೆಮೇಲೆ ಕೈಹೊತ್ತು ಕೂರುವ ಸ್ಥಿತಿಯಲ್ಲಿದ್ದಾರೆ. ಇಂತಹವರ ನೆರವಿಗೆ ಸರ್ಕಾರ ಮುಂದಾಗಬೇಕೇ ಹೊರತು ಕಂಬಳವನ್ನು ನಡೆಸಿಯೇ ತೀರುತ್ತೇವೆ ಎಂಬ ಹಠ ಒಳ್ಳೆಯದಲ್ಲ. ಇದಕ್ಕೆ ಖರ್ಚುಮಾಡುವ ಹಣವನ್ನು ರೈತರಿಗೆ ಅನುಕೂಲವಾಗುವ ರೀತಿ ಖರ್ಚು ಮಾಡಿದರೆ ಅರ್ಥಪೂಣವಾಗಿರುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

51 seconds ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

5 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

9 mins ago

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

11 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

24 hours ago