Andolana originals

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ ಆತನದ್ದು ಅಪಾರ ಅಹಂಕಾರ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೂ ಮುಂದಾಗಿರುವ ಮುಖ್ಯಸ್ಥನ ವಿರುದ್ಧ ಇಡೀ ದೇಶವೇ ತಿರುಗಿಬಿದ್ದಿದೆ. ಎಲ್ಲ ವಯೋಮಾನದವರೂ ಪ್ರತಿಭಟನೆಯ ಅಸ್ತ್ರ ಹಿಡಿದು ಬೀದಿಗಿಳಿದಿದ್ದಾರೆ. ಮುಖ್ಯಸ್ಥನ ಪ್ರತಿಕೃತಿಯನ್ನು ದಹಿಸಿದ್ದಾರೆ. ಸಿಕ್ಕಿದ್ದರೆಲ್ಲೆಲ್ಲ ಆತನ ಚಿತ್ರಪಟಕ್ಕೆ ಹೊಡೆಯುತ್ತಿದ್ದಾರೆ. ನಮಗೆ ರಾಜಪ್ರಭುತ್ವ ಬೇಕಿಲ್ಲ; ಪ್ರಜಾಪ್ರಭುತ್ವ ಬೇಕು ಎಂದು ಗುಡುಗಿದ್ದಾರೆ. ಹಾಗಿದ್ದರೂ ಯುದ್ಧದಿಂದ ಹಿಂದೆ ಸರಿಯುವ ಜನಪರ, ಜೀವಪರ ಚಿಂತನೆ ಆತನಿಗಿಲ್ಲ. ಆದರೆ, ಜನಾಕ್ರೋಶವನ್ನು ಎದುರಿಸುವುದು ಅಷ್ಟು ಸುಲಭವಲ್ಲ ಎಂಬುದು ಆ ಮುಖ್ಯಸ್ಥನಿಗೆ ಅರ್ಥ ಆಗಿದ್ದಂತೆ ಇಲ್ಲ. ಇದು ಯಾವ ದೇಶದ ಕಥೆ ನಿಮಗೆ ಗೊತ್ತಾಯಿತೆ? ಇದು ಅಮೆರಿಕ ದೇಶದ ಪರಿಸ್ಥಿತಿ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಟ್ಟಹಾಸದ ಪರಿಣಾಮ.

ಭಾರತದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಇಲ್ಲಿಯೂ ಅಮೆರಿಕದಂತಹ ಪ್ರತಿಭಟನೆಗಳು ನಡೆಯುವುದು ಸಾಧ್ಯವೆ? ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯಾದರೆ ಜನರು ಆಕ್ರೋಶ ವ್ಯಕ್ತಪಡಿಸಲು ಅವಕಾಶ ಇದೆಯೇ? ಜನಪರ ಹೋರಾಟಗಾರರು ಜೈಲಿಗೆ ಹೋಗದೇ ತಪ್ಪಿಸಿಕೊಳ್ಳಲು ಅವಕಾಶ ಇದೆಯೇ? ಎಲ್ಲರೂ ಯೋಚಿಸಬೇಕಾದ ಜರೂರತ್ತು ಇದೆ.

ರಾಜಶೇಖರ್, ಜನತಾನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

7 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

9 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago