Andolana originals

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ ಆತನದ್ದು ಅಪಾರ ಅಹಂಕಾರ. ಇಂತಹ ಸರ್ವಾಧಿಕಾರಿ ಧೋರಣೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣಕ್ಕೂ ಮುಂದಾಗಿರುವ ಮುಖ್ಯಸ್ಥನ ವಿರುದ್ಧ ಇಡೀ ದೇಶವೇ ತಿರುಗಿಬಿದ್ದಿದೆ. ಎಲ್ಲ ವಯೋಮಾನದವರೂ ಪ್ರತಿಭಟನೆಯ ಅಸ್ತ್ರ ಹಿಡಿದು ಬೀದಿಗಿಳಿದಿದ್ದಾರೆ. ಮುಖ್ಯಸ್ಥನ ಪ್ರತಿಕೃತಿಯನ್ನು ದಹಿಸಿದ್ದಾರೆ. ಸಿಕ್ಕಿದ್ದರೆಲ್ಲೆಲ್ಲ ಆತನ ಚಿತ್ರಪಟಕ್ಕೆ ಹೊಡೆಯುತ್ತಿದ್ದಾರೆ. ನಮಗೆ ರಾಜಪ್ರಭುತ್ವ ಬೇಕಿಲ್ಲ; ಪ್ರಜಾಪ್ರಭುತ್ವ ಬೇಕು ಎಂದು ಗುಡುಗಿದ್ದಾರೆ. ಹಾಗಿದ್ದರೂ ಯುದ್ಧದಿಂದ ಹಿಂದೆ ಸರಿಯುವ ಜನಪರ, ಜೀವಪರ ಚಿಂತನೆ ಆತನಿಗಿಲ್ಲ. ಆದರೆ, ಜನಾಕ್ರೋಶವನ್ನು ಎದುರಿಸುವುದು ಅಷ್ಟು ಸುಲಭವಲ್ಲ ಎಂಬುದು ಆ ಮುಖ್ಯಸ್ಥನಿಗೆ ಅರ್ಥ ಆಗಿದ್ದಂತೆ ಇಲ್ಲ. ಇದು ಯಾವ ದೇಶದ ಕಥೆ ನಿಮಗೆ ಗೊತ್ತಾಯಿತೆ? ಇದು ಅಮೆರಿಕ ದೇಶದ ಪರಿಸ್ಥಿತಿ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಟ್ಟಹಾಸದ ಪರಿಣಾಮ.

ಭಾರತದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಇಲ್ಲಿಯೂ ಅಮೆರಿಕದಂತಹ ಪ್ರತಿಭಟನೆಗಳು ನಡೆಯುವುದು ಸಾಧ್ಯವೆ? ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯಾದರೆ ಜನರು ಆಕ್ರೋಶ ವ್ಯಕ್ತಪಡಿಸಲು ಅವಕಾಶ ಇದೆಯೇ? ಜನಪರ ಹೋರಾಟಗಾರರು ಜೈಲಿಗೆ ಹೋಗದೇ ತಪ್ಪಿಸಿಕೊಳ್ಳಲು ಅವಕಾಶ ಇದೆಯೇ? ಎಲ್ಲರೂ ಯೋಚಿಸಬೇಕಾದ ಜರೂರತ್ತು ಇದೆ.

ರಾಜಶೇಖರ್, ಜನತಾನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

3 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

3 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

3 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

4 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

6 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

7 hours ago