ಓದುಗರ ಪತ್ರ
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ ನಡುವೆ ತಮಿಳುನಾಡು ರಾಜ್ಯ ಎಂದಿನಂತೆ ತನ್ನ ನೀರಿನ ಹಕ್ಕಿನ ಕ್ಯಾತೆಯನ್ನು ಮುಂದುವರಿಸಿದೆ.
ತಮಿಳುನಾಡು ತಮ್ಮ ಪಾಲಿನ ನೀರಿಗೆ ಹಕ್ಕು ಮಂಡಿಸಿರುವುದು ಶೋಚನೀಯ. ನಮ್ಮ ರಾಜ್ಯವು ಕಳೆದ ಸಾಲಿನಲ್ಲಿ ೨೩೦ ಟಿಎಂಸಿಗಳಿಗೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಏಕಪಕ್ಷೀಯವಾಗಿಯೇ ತಮಿಳುನಾಡಿಗೆ ಕರ್ನಾಟಕ ನೀರು ಹರಿಸಬೇಕೆಂದು ಆದೇಶ ನೀಡುತ್ತಿರುವುದು ಸರಿಯಲ್ಲ. ಬಹುಶಃ ಲೋಕಸಭೆಯಲ್ಲಿ ಮಂಡಿಸಲಿರುವ ಕೆಲವು ಮಸೂದೆಗಳ ಬೆಂಬಲವನ್ನು ತಮಿಳುನಾಡಿನ ಡಿಎಂಕೆ ಮತ್ತು ಇತರೆ ಪಕ್ಷಗಳಿಂದ ಪಡೆಯುವ ಸಲುವಾಗಿ ಕರ್ನಾಟಕವನ್ನು ಹರಕೆಯ ಕುರಿಯನ್ನಾಗಿ ಮಾಡುವ ಇರಾದೆಯನ್ನೂ ತಳ್ಳಿಹಾಕುವಂತಿಲ್ಲ.
ಇನ್ನು ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸುವ ವಾಟಾಳ್ ನಾಗರಾಜ್ ರವರು, ನಮ್ಮ ಕೈಮೇಲೆ ನಾವೇ ಬರೆಹಾಕಿಕೊಂಡಂತೆ, ನಮ್ಮ ರಾಜ್ಯವನ್ನು ಬಂದ್ ಮಾಡಿ, ನಮ್ಮ ವಹಿವಾಟಿಗೆ ಧಕ್ಕೆ ತಂದುಕೊಂಡು ಮತ್ತು ನಮ್ಮ ಜನಕ್ಕೆ ತೊಂದರೆಯಾಗುವಂತೆ ಮಾಡಿದರೆ ಆಗುವ ಲಾಭವೇನು? ಕೇಂದ್ರದ ವಿರುದ್ಧ ಜನ ದನಿ ಎತ್ತಬೇಕು, ಅದಕ್ಕೆ ರಾಜ್ಯದ ಎಲ್ಲ ಸಂಸದರು ಪಕ್ಷಾತೀತವಾಗಿ ಹೋರಾಡಬೇಕು. ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ ೧೯೫೬ ಅನ್ನು ಇಂದಿನ ಪರಿಸ್ಥಿತಿಗೆ ತಕ್ಕಂತೆ ಮಾರ್ಪಡಿಸಬೇಕೆನ್ನುವ ಕೂಗು ಪ್ರಧಾನಿಯನ್ನು ಮುಟ್ಟಲಿ. ವಾಸ್ತವ ಅರಿಯುವಂತೆ ಮಾಡಿ ಹೋರಾಟ ನಡೆಸಲಿ.
-ವಿಜಯ್ ಹೆಮ್ಮಿಗೆ, ಮೈಸೂರು
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…
ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…