Andolana originals

ಓದುಗರ ಪತ್ರ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಕತ್ತರಿಸಿದ್ದು ಅಕ್ಷಮ್ಯ

ಇತ್ತೀಚೆಗೆ ನಡೆದ ಕರ್ನಾಟಕ ಸಿ.ಇ.ಟಿ. ಪರೀಕ್ಷೆಯಲ್ಲಿ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿ ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅನುಮತಿಸಿಲ್ಲದ ಮತ್ತು ಜನಿವಾರವನ್ನು  ಹಾಗೂ ಕೈಗೆ ಕಟ್ಟಿಕೊಂಡಿರುವ ಕಾಶಿ ದಾರವನ್ನು ಕತ್ತರಿಸಿರುವುದು, ನಿಜಕ್ಕೂ ಹೇಯ, ಅವಮಾನಕರ ಮತ್ತು ಅಕ್ಷಮ್ಯ ಅಪರಾಧವೇ ಸರಿ.

ಬಹುಶಃ ಜನಿವಾರಕ್ಕೆ ಬ್ಲೂ ಟೂತ್ ಸಿಕ್ಕಿಸಿ ಪರೀಕ್ಷೆಗಳಲ್ಲಿ ನಕಲು ಮಾಡುತ್ತಾರೆ ಎಂದುಕೊಂಡರೆ, ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಅಂತಹ ಪರೀಕ್ಷೆ ನಕಲು ಮಾಡುವ ವಿದ್ಯುನ್ಮಾನ ವಸ್ತುಗಳನ್ನು ಒಳಗೆ ತರುತ್ತಾರೆಯೇ ಎಂದು ಕಂಡುಕೊಳ್ಳಬಹುದಲ್ಲವೇ? ಅಲ್ಲದೆ ವಿದ್ಯಾರ್ಥಿಗಳನ್ನು ಒಳಬಿಡುವ ಮುನ್ನ ಲೋಹ ಪರೀಕ್ಷಕ ಯಂತ್ರದಲ್ಲಿ ಸ್ಕ್ಯಾನಿಂಗ್ ಮಾಡಿ, ವಿದ್ಯಾರ್ಥಿಗಳನ್ನು ಕೂಲಂಕಷವಾಗಿ ತಪಾಸಣೆ ಮಾಡುವ ಇವರು ಜನಿವಾರದಲ್ಲಿ ಅಂತಹ ವಸ್ತುಗಳಿದ್ದಲ್ಲಿ ತೆಗೆಸಬಹುದಿತ್ತಲ್ಲವೇ?  ಅಷ್ಟಕ್ಕೂ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸುವ ಯೋಚನೆ ಕೂಡ ಮಾಡಬಹುದಿತ್ತು.  ಇಷ್ಟು ನಿರ್ವಹಿಸಿದ ಸಿಬ್ಬಂದಿ ಮುಂದಿನ ದಿನಗಳಲ್ಲಿ ಹಣೆಗೆ ತಿಲಕವೋ, ನಾಮವೋ,  ವಿಭೂತಿಯೋ, ಕುಂಕುಮವೋ ಹಚ್ಚಿಕೊಂಡು ಹೋದರೆ ಅದನ್ನು ಅಳಿಸಿರಿ  ಎನ್ನಬಹುದು. ಜುಟ್ಟು ಬಿಟ್ಟುಕೊಂಡು  ಹೋದರೆ ಅದನ್ನು  ಕತ್ತರಿಸಿ ಎಂದು ವಿಕೃತಿ ಮೆರೆಯುವುದರಲ್ಲಿ ಸಂದೇಹವೇ ಇಲ್ಲ.

ಅನ್ಯ ಸಮುದಾಯದ ವಸ್ತ್ರ ವೇಷಭೂಷಗಳನ್ನು ತೆಗೆಸಿದ್ದರೆ  ಇಷ್ಟು ಹೊತ್ತಿಗೆ ರಾದ್ಧಾಂತವಾಗುತ್ತಿತ್ತು. ಇಷ್ಟು ದಿನವೂ ಬರೀ ಟೀಕೆ, ಟಿಪ್ಪಣಿಗಳಿಗೆ ಆಹಾರವಾಗುತ್ತಿದ್ದ ವಿಪ್ರ ಸಮುದಾಯ ಇದೀಗ ವಿಕೃತ ಮನಸ್ಸಿನ ಇಂಥವರ ಕೃತ್ಯಗಳಿಗೆ ಒಳಗಾಗುತ್ತಿರುವುದು ಖೇದಕರ ಮತ್ತು ಅವಮಾನಕರ ಸಂಗತಿಯಾಗಿದೆ.

-ವಿಜಯ್ ಹೆಮ್ಮಿಗೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

14 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago