Andolana originals

ಓದುಗರ ಪತ್ರ: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಕತ್ತರಿಸಿದ್ದು ಅಕ್ಷಮ್ಯ

ಇತ್ತೀಚೆಗೆ ನಡೆದ ಕರ್ನಾಟಕ ಸಿ.ಇ.ಟಿ. ಪರೀಕ್ಷೆಯಲ್ಲಿ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿ ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅನುಮತಿಸಿಲ್ಲದ ಮತ್ತು ಜನಿವಾರವನ್ನು  ಹಾಗೂ ಕೈಗೆ ಕಟ್ಟಿಕೊಂಡಿರುವ ಕಾಶಿ ದಾರವನ್ನು ಕತ್ತರಿಸಿರುವುದು, ನಿಜಕ್ಕೂ ಹೇಯ, ಅವಮಾನಕರ ಮತ್ತು ಅಕ್ಷಮ್ಯ ಅಪರಾಧವೇ ಸರಿ.

ಬಹುಶಃ ಜನಿವಾರಕ್ಕೆ ಬ್ಲೂ ಟೂತ್ ಸಿಕ್ಕಿಸಿ ಪರೀಕ್ಷೆಗಳಲ್ಲಿ ನಕಲು ಮಾಡುತ್ತಾರೆ ಎಂದುಕೊಂಡರೆ, ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಅಂತಹ ಪರೀಕ್ಷೆ ನಕಲು ಮಾಡುವ ವಿದ್ಯುನ್ಮಾನ ವಸ್ತುಗಳನ್ನು ಒಳಗೆ ತರುತ್ತಾರೆಯೇ ಎಂದು ಕಂಡುಕೊಳ್ಳಬಹುದಲ್ಲವೇ? ಅಲ್ಲದೆ ವಿದ್ಯಾರ್ಥಿಗಳನ್ನು ಒಳಬಿಡುವ ಮುನ್ನ ಲೋಹ ಪರೀಕ್ಷಕ ಯಂತ್ರದಲ್ಲಿ ಸ್ಕ್ಯಾನಿಂಗ್ ಮಾಡಿ, ವಿದ್ಯಾರ್ಥಿಗಳನ್ನು ಕೂಲಂಕಷವಾಗಿ ತಪಾಸಣೆ ಮಾಡುವ ಇವರು ಜನಿವಾರದಲ್ಲಿ ಅಂತಹ ವಸ್ತುಗಳಿದ್ದಲ್ಲಿ ತೆಗೆಸಬಹುದಿತ್ತಲ್ಲವೇ?  ಅಷ್ಟಕ್ಕೂ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸುವ ಯೋಚನೆ ಕೂಡ ಮಾಡಬಹುದಿತ್ತು.  ಇಷ್ಟು ನಿರ್ವಹಿಸಿದ ಸಿಬ್ಬಂದಿ ಮುಂದಿನ ದಿನಗಳಲ್ಲಿ ಹಣೆಗೆ ತಿಲಕವೋ, ನಾಮವೋ,  ವಿಭೂತಿಯೋ, ಕುಂಕುಮವೋ ಹಚ್ಚಿಕೊಂಡು ಹೋದರೆ ಅದನ್ನು ಅಳಿಸಿರಿ  ಎನ್ನಬಹುದು. ಜುಟ್ಟು ಬಿಟ್ಟುಕೊಂಡು  ಹೋದರೆ ಅದನ್ನು  ಕತ್ತರಿಸಿ ಎಂದು ವಿಕೃತಿ ಮೆರೆಯುವುದರಲ್ಲಿ ಸಂದೇಹವೇ ಇಲ್ಲ.

ಅನ್ಯ ಸಮುದಾಯದ ವಸ್ತ್ರ ವೇಷಭೂಷಗಳನ್ನು ತೆಗೆಸಿದ್ದರೆ  ಇಷ್ಟು ಹೊತ್ತಿಗೆ ರಾದ್ಧಾಂತವಾಗುತ್ತಿತ್ತು. ಇಷ್ಟು ದಿನವೂ ಬರೀ ಟೀಕೆ, ಟಿಪ್ಪಣಿಗಳಿಗೆ ಆಹಾರವಾಗುತ್ತಿದ್ದ ವಿಪ್ರ ಸಮುದಾಯ ಇದೀಗ ವಿಕೃತ ಮನಸ್ಸಿನ ಇಂಥವರ ಕೃತ್ಯಗಳಿಗೆ ಒಳಗಾಗುತ್ತಿರುವುದು ಖೇದಕರ ಮತ್ತು ಅವಮಾನಕರ ಸಂಗತಿಯಾಗಿದೆ.

-ವಿಜಯ್ ಹೆಮ್ಮಿಗೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago