ಓದುಗರ ಪತ್ರ
ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್ಆಪ್, ಇನ್ಸ್ಟಾಗ್ರಾಮ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಹಾಗೂ ಜನ ಸಾಮಾನ್ಯರ ಮೇಲೆ ಸಾಕಷ್ಟು ಪ್ರಭಾವ ಉಂಟು ಮಾಡಿವೆ. ಇವುಗಳಿಂದಾಗಿ ಸಮಾಜದ ಸ್ವಾಸ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.
ಕೋಮು ವಿರೋಧಿ ಭಾವನೆ, ಧರ್ಮ-ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವುದು, ಪರಸ್ಪರ ವೈರತ್ವ ಬೆಳೆಸುವುದು, ವ್ಯಕ್ತಿ ನಿಂದನೆ, ಜಾತಿ ನಿಂದನೆ ಮುಂತಾದವುಗಳನ್ನು ಒಳಗೊಂಡ ಸುದ್ದಿ ಸಮಾಚಾರಗಳು, ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಯಥೇಚ್ಛವಾಗಿ ಕಾಣಿಸಿಕೊಳ್ಳುತ್ತಿವೆ. ಧರ್ಮಸ್ಥಳದ ಪರವಾಗಿ ಹಾಗೂ ವಿರುದ್ಧ್ದವಾಗಿ ನೂರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. ಇವುಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಎಂಬ ಗೊಂದಲ ಇವುಗಳನ್ನು ನೋಡಿದವರಿಗೆ ಉಂಟಾಗುತ್ತಿದೆ. ಬೇಡದ್ದನ್ನೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡುವುದು ದುರಂತವೇ ಸರಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇನ್ನು ಮೇಲಾದರೂ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಹೇರಬೇಕಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…