ಓದುಗರ ಪತ್ರ
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ಬೆನ್ನೆಲುಬು ಮುರಿಯುವ ಸಂಚು. ಆಡಳಿತಾತ್ಮಕ ವೆಚ್ಚವನ್ನು ಶೇ. ೨೦ಕ್ಕೆ ಇಳಿಸಿರುವುದು ಮತ್ತು ದೆಹಲಿಯ ಖಾತೆ ತೆರೆಯಬೇಕೆಂಬ ಕಟ್ಟುನಿಟ್ಟು, ಗ್ರಾಮೀಣ ಭಾಗದ ಕುಷ್ಠರೋಗಿ ಕೇಂದ್ರಗಳು ಹಾಗೂ ಅನಾಥಾಶ್ರಮಗಳ ಆರ್ಥಿಕ ಮೂಲವನ್ನೇ ಕತ್ತರಿಸಿವೆ.
ವಿದೇಶಿ ದೇಣಿಗೆ ದುರುಪಯೋಗವಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅಂಕಿ-ಅಂಶಗಳ ಪ್ರಕಾರ, ಲಕ್ಷಾಂತರ ಬಡವರು ಈ ಸಂಸ್ಥೆಗಳ ಮೂಲಕ ಉಚಿತ ಚಿಕಿತ್ಸೆ ಪಡೆಯುತ್ತಿzರೆ. ಈ ಬಿಗಿ ನಿಯಮಗಳು ಮಾನವೀಯ ನೆಲೆಯ ಸೇವಾ ಚಟುವಟಿಕೆಗಳನ್ನು ಹತ್ತಿಕ್ಕುತ್ತಿವೆ.
ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನಡೆಯುತ್ತಿರುವ ಈ ಕಿರುಕುಳವು ಅಂತಿಮವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದೆ. ಸರ್ಕಾರ ಈ ಕಠಿಣ ನಿಲುವುಗಳನ್ನು ಮರುಪರಿಶೀಲಿಸುವುದು ಅತ್ಯಗತ್ಯ.
-ಎಚ್.ಕೆ. ಡಾ.ವಿಜಯಕುಮಾರ,ಬೆಂಗಳೂರು
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…