ಓದುಗರ ಪತ್ರ
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ಬೆನ್ನೆಲುಬು ಮುರಿಯುವ ಸಂಚು. ಆಡಳಿತಾತ್ಮಕ ವೆಚ್ಚವನ್ನು ಶೇ. ೨೦ಕ್ಕೆ ಇಳಿಸಿರುವುದು ಮತ್ತು ದೆಹಲಿಯ ಖಾತೆ ತೆರೆಯಬೇಕೆಂಬ ಕಟ್ಟುನಿಟ್ಟು, ಗ್ರಾಮೀಣ ಭಾಗದ ಕುಷ್ಠರೋಗಿ ಕೇಂದ್ರಗಳು ಹಾಗೂ ಅನಾಥಾಶ್ರಮಗಳ ಆರ್ಥಿಕ ಮೂಲವನ್ನೇ ಕತ್ತರಿಸಿವೆ.
ವಿದೇಶಿ ದೇಣಿಗೆ ದುರುಪಯೋಗವಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅಂಕಿ-ಅಂಶಗಳ ಪ್ರಕಾರ, ಲಕ್ಷಾಂತರ ಬಡವರು ಈ ಸಂಸ್ಥೆಗಳ ಮೂಲಕ ಉಚಿತ ಚಿಕಿತ್ಸೆ ಪಡೆಯುತ್ತಿzರೆ. ಈ ಬಿಗಿ ನಿಯಮಗಳು ಮಾನವೀಯ ನೆಲೆಯ ಸೇವಾ ಚಟುವಟಿಕೆಗಳನ್ನು ಹತ್ತಿಕ್ಕುತ್ತಿವೆ.
ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನಡೆಯುತ್ತಿರುವ ಈ ಕಿರುಕುಳವು ಅಂತಿಮವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕಾದ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದೆ. ಸರ್ಕಾರ ಈ ಕಠಿಣ ನಿಲುವುಗಳನ್ನು ಮರುಪರಿಶೀಲಿಸುವುದು ಅತ್ಯಗತ್ಯ.
-ಎಚ್.ಕೆ. ಡಾ.ವಿಜಯಕುಮಾರ,ಬೆಂಗಳೂರು
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…