Andolana originals

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ ಮತ್ತು ಹಣ ದುರುಪಯೋಗದ ಆರೋಪಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಚಾರಣೆ ನಡೆಸುತ್ತಿದೆ. ಈ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್‌ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ ಗಾಯತ್ರಿ ಅವರನ್ನುಮೂರು ತಿಂಗಳ ಅವಧಿಗೆ ಸರ್ಕಾರ ಆಡಳಿತಾಧಿಕಾರಿಯಾಗಿ ನೇಮಕ ಮಾಡಿತ್ತು, ಕಳೆದ ಶುಕ್ರವಾರ ಇವರ ಆಡಳಿತಾವಧಿ ಮುಗಿಯುತ್ತದೆ ಎಂದು ತಿಳಿದು ಮಹೇಶ್ ಜೋಶಿ ಕನ್ನಡ ಸಾಹಿತ್ಯ ಪರಿಷತ್‌ನ ಬಾಗಿಲು ಬಡಿದು ಅಲ್ಲಿನ ಸಿಬ್ಬಂದಿಗೆ ಬಾಗಿಲು ತೆರೆಯುವಂತೆ ಜೋರು ಮಾಡಿದ್ದಾರೆ, ಆದರೆ ಅಲ್ಲಿನ ಸಿಬ್ಬಂದಿ ಬಾಗಿಲು ತೆರೆಯದೇ ಪೊಲೀಸರ ನೆರವಿನಿಂದಜೋಶಿಯವರನ್ನು ವಾಪಸ್ ಕಳುಹಿಸಿದ್ದಾರೆ. ಈಗ ಮತ್ತೆ ಸರ್ಕಾರ ಮೂರು ತಿಂಗಳ ಅವಧಿಗೆ ಆಡಳಿತಾಧಿಕಾರಿಯವರ ಅಧಿಕಾರವನ್ನು ವಿಸ್ತರಿಸಿದೆ. ಒಬ್ಬ ಪರಿಷತ್‌ನ ಅಧ್ಯಕ್ಷನಾಗಿ ತನ್ನ ವಿರುದ್ಧ ತನಿಖೆ ನಡೆಯುತ್ತಿದ್ದರೂ, ಪರಿಷತ್‌ಗೆ ಹೋಗಿ ಕುರ್ಚಿ ಮೇಲೆ ಕುಳಿತುಕೊಳ್ಳಲು ಇವರಿಗೆ ಯಾವ ನೈತಿಕತೆ ಇದೆ? ಈತನಿಗೆ ಕನಿಷ್ಠ ತಿಳಿವಳಿಕೆಯಾದರೂ ಬೇಡವೇ? ಕನ್ನಡಕ್ಕಾಗಿ ತ್ಯಾಗ ಮಾಡಿದ ಅನೇಕ ಮಹನೀಯರು ಕುಳಿತ ಕುರ್ಚಿಗೆ ಅವಮಾನ ಮಾಡಿದ ಕೀರ್ತಿ ಈ ತನಿಗೆ ಸಲ್ಲುತ್ತದೆ. ಈತ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಬಂದ ನಂತರ ನಡೆಸಿದ ಹುಚ್ಚಾಟಗಳಿಂದಾಗಿ ಪರಿಷತ್‌ನ ಗೌರವವೇ ಬೀದಿ ಪಾಲಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

2 mins ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

4 mins ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

3 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

3 hours ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

3 hours ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

3 hours ago