ಓದುಗರ ಪತ್ರ
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ ಮತ್ತು ಹಣ ದುರುಪಯೋಗದ ಆರೋಪಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಚಾರಣೆ ನಡೆಸುತ್ತಿದೆ. ಈ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ ಗಾಯತ್ರಿ ಅವರನ್ನುಮೂರು ತಿಂಗಳ ಅವಧಿಗೆ ಸರ್ಕಾರ ಆಡಳಿತಾಧಿಕಾರಿಯಾಗಿ ನೇಮಕ ಮಾಡಿತ್ತು, ಕಳೆದ ಶುಕ್ರವಾರ ಇವರ ಆಡಳಿತಾವಧಿ ಮುಗಿಯುತ್ತದೆ ಎಂದು ತಿಳಿದು ಮಹೇಶ್ ಜೋಶಿ ಕನ್ನಡ ಸಾಹಿತ್ಯ ಪರಿಷತ್ನ ಬಾಗಿಲು ಬಡಿದು ಅಲ್ಲಿನ ಸಿಬ್ಬಂದಿಗೆ ಬಾಗಿಲು ತೆರೆಯುವಂತೆ ಜೋರು ಮಾಡಿದ್ದಾರೆ, ಆದರೆ ಅಲ್ಲಿನ ಸಿಬ್ಬಂದಿ ಬಾಗಿಲು ತೆರೆಯದೇ ಪೊಲೀಸರ ನೆರವಿನಿಂದಜೋಶಿಯವರನ್ನು ವಾಪಸ್ ಕಳುಹಿಸಿದ್ದಾರೆ. ಈಗ ಮತ್ತೆ ಸರ್ಕಾರ ಮೂರು ತಿಂಗಳ ಅವಧಿಗೆ ಆಡಳಿತಾಧಿಕಾರಿಯವರ ಅಧಿಕಾರವನ್ನು ವಿಸ್ತರಿಸಿದೆ. ಒಬ್ಬ ಪರಿಷತ್ನ ಅಧ್ಯಕ್ಷನಾಗಿ ತನ್ನ ವಿರುದ್ಧ ತನಿಖೆ ನಡೆಯುತ್ತಿದ್ದರೂ, ಪರಿಷತ್ಗೆ ಹೋಗಿ ಕುರ್ಚಿ ಮೇಲೆ ಕುಳಿತುಕೊಳ್ಳಲು ಇವರಿಗೆ ಯಾವ ನೈತಿಕತೆ ಇದೆ? ಈತನಿಗೆ ಕನಿಷ್ಠ ತಿಳಿವಳಿಕೆಯಾದರೂ ಬೇಡವೇ? ಕನ್ನಡಕ್ಕಾಗಿ ತ್ಯಾಗ ಮಾಡಿದ ಅನೇಕ ಮಹನೀಯರು ಕುಳಿತ ಕುರ್ಚಿಗೆ ಅವಮಾನ ಮಾಡಿದ ಕೀರ್ತಿ ಈ ತನಿಗೆ ಸಲ್ಲುತ್ತದೆ. ಈತ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಬಂದ ನಂತರ ನಡೆಸಿದ ಹುಚ್ಚಾಟಗಳಿಂದಾಗಿ ಪರಿಷತ್ನ ಗೌರವವೇ ಬೀದಿ ಪಾಲಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…