Andolana originals

ಓದುಗರ ಪತ್ರ: ಉಳ್ಳವರಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯವೇ?

ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್‌ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಮುಂಬೈನ ಉನ್ನತ ನ್ಯಾಯಾಲಯ ಸಲ್ಮಾನ್ ಖಾನ್ ಬಂಧನಕ್ಕೂ ಮೊದಲೇ ಅವರಿಗೆ ಜಾಮೀನು ನೀಡಿತು. ಅಂತಹದ್ದೇ ಪ್ರಕರಣ ಈಗ ಮರುಕಳಿಸಿದ್ದು, ಉಳ್ಳವರಿಗೆ ಒಂದು ಕಾನೂನು ಬಡವರಿಗೆ ಒಂದು ಕಾನೂನು ಇದೆಯೇ ಎಂಬ ಪ್ರಶ್ನೆ ಮೂಡಿಸಿದೆ.

ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ-೨ ಸಿನಿಮಾ ಪ್ರದರ್ಶನದ ವೇಳೆ ಯಾವುದೇ ಮಾಹಿತಿ ನೀಡದೆ ಚಿತ್ರ ಮಂದಿರಕ್ಕೆ ಅಲ್ಲು ಅರ್ಜುನ್ ಏಕಾಏಕಿ ಭೇಟಿ ನೀಡಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ೯ ವರ್ಷದ ಮಗನೂ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಡಿ.೧೩ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆದರೆ ಉನ್ನತ ನ್ಯಾಯಾಲಯ ಆತನಿಗೆ ಅಂದೇ ಜಾಮೀನು ಮಂಜೂರು ಮಾಡಿತು. ಇಂತಹ ಪ್ರಕರಣಗಳನ್ನು ಗಮನಿಸಿದರೆ ನ್ಯಾಯಾಲಯಗಳ ಈ ಶೀಘ್ರ ತೀರ್ಪಿನ ಕ್ರಮ ಜನಸಾಮಾನ್ಯರ ಪ್ರಕರಣಗಳಲ್ಲಿ ಏಕಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ಜನಸಾಮಾನ್ಯರ ಪ್ರಕರಣಗಳು ನ್ಯಾಯಾಲಯಕ್ಕೆ ಬರುವುದೇ ತಡವಾಗುತ್ತದೆ. ಬಂದರೂ ಜಾಮೀನು ಸಿಗಲು ಅಥವಾ ಪ್ರಕರಣದ ತೀರ್ಪು ಹೊರಬರಲು ದಶಕವೇ ಬೇಕಾಗಬಹುದು. ಇನ್ನು ಮೃತ ಮಹಿಳೆಯ ಬಗ್ಗೆ ಕಿಂಚಿತ್ತೂ ಕರುಣೆ ತೋರದ ಅನೇಕ ರಾಜಕಾರಣಿಗಳು ಅಲ್ಲು ಅರ್ಜುನ್ ಪರವಾಗಿ ಮಾತನಾಡಿದ್ದು, ನಟನ ಬಂಧನವನ್ನು ಖಂಡಿಸಿದ್ದಾರೆ. ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದ ನಟನನ್ನು ಬಂಽಸಿರುವುದು ಪೊಲೀಸರ ಅಮಾನವೀಯ ನಡೆ ಎಂದಿದ್ದಾರೆ. ಇಂತಹ ಬೆಳವಣಿಗೆಗಳು ಜನಸಾಮಾನ್ಯರಿಗೆ ನ್ಯಾಯ ದೊರಕುತ್ತದೆ ಎಂಬ ಭರವಸೆಯನ್ನು ದೂರಾಗಿಸುತ್ತವೆ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago