ಓದುಗರ ಪತ್ರ
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಮುಂಬೈನ ಉನ್ನತ ನ್ಯಾಯಾಲಯ ಸಲ್ಮಾನ್ ಖಾನ್ ಬಂಧನಕ್ಕೂ ಮೊದಲೇ ಅವರಿಗೆ ಜಾಮೀನು ನೀಡಿತು. ಅಂತಹದ್ದೇ ಪ್ರಕರಣ ಈಗ ಮರುಕಳಿಸಿದ್ದು, ಉಳ್ಳವರಿಗೆ ಒಂದು ಕಾನೂನು ಬಡವರಿಗೆ ಒಂದು ಕಾನೂನು ಇದೆಯೇ ಎಂಬ ಪ್ರಶ್ನೆ ಮೂಡಿಸಿದೆ.
ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ-೨ ಸಿನಿಮಾ ಪ್ರದರ್ಶನದ ವೇಳೆ ಯಾವುದೇ ಮಾಹಿತಿ ನೀಡದೆ ಚಿತ್ರ ಮಂದಿರಕ್ಕೆ ಅಲ್ಲು ಅರ್ಜುನ್ ಏಕಾಏಕಿ ಭೇಟಿ ನೀಡಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ೯ ವರ್ಷದ ಮಗನೂ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಡಿ.೧೩ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆದರೆ ಉನ್ನತ ನ್ಯಾಯಾಲಯ ಆತನಿಗೆ ಅಂದೇ ಜಾಮೀನು ಮಂಜೂರು ಮಾಡಿತು. ಇಂತಹ ಪ್ರಕರಣಗಳನ್ನು ಗಮನಿಸಿದರೆ ನ್ಯಾಯಾಲಯಗಳ ಈ ಶೀಘ್ರ ತೀರ್ಪಿನ ಕ್ರಮ ಜನಸಾಮಾನ್ಯರ ಪ್ರಕರಣಗಳಲ್ಲಿ ಏಕಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ಜನಸಾಮಾನ್ಯರ ಪ್ರಕರಣಗಳು ನ್ಯಾಯಾಲಯಕ್ಕೆ ಬರುವುದೇ ತಡವಾಗುತ್ತದೆ. ಬಂದರೂ ಜಾಮೀನು ಸಿಗಲು ಅಥವಾ ಪ್ರಕರಣದ ತೀರ್ಪು ಹೊರಬರಲು ದಶಕವೇ ಬೇಕಾಗಬಹುದು. ಇನ್ನು ಮೃತ ಮಹಿಳೆಯ ಬಗ್ಗೆ ಕಿಂಚಿತ್ತೂ ಕರುಣೆ ತೋರದ ಅನೇಕ ರಾಜಕಾರಣಿಗಳು ಅಲ್ಲು ಅರ್ಜುನ್ ಪರವಾಗಿ ಮಾತನಾಡಿದ್ದು, ನಟನ ಬಂಧನವನ್ನು ಖಂಡಿಸಿದ್ದಾರೆ. ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದ ನಟನನ್ನು ಬಂಽಸಿರುವುದು ಪೊಲೀಸರ ಅಮಾನವೀಯ ನಡೆ ಎಂದಿದ್ದಾರೆ. ಇಂತಹ ಬೆಳವಣಿಗೆಗಳು ಜನಸಾಮಾನ್ಯರಿಗೆ ನ್ಯಾಯ ದೊರಕುತ್ತದೆ ಎಂಬ ಭರವಸೆಯನ್ನು ದೂರಾಗಿಸುತ್ತವೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…