ಓದುಗರ ಪತ್ರ
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಮುಂಬೈನ ಉನ್ನತ ನ್ಯಾಯಾಲಯ ಸಲ್ಮಾನ್ ಖಾನ್ ಬಂಧನಕ್ಕೂ ಮೊದಲೇ ಅವರಿಗೆ ಜಾಮೀನು ನೀಡಿತು. ಅಂತಹದ್ದೇ ಪ್ರಕರಣ ಈಗ ಮರುಕಳಿಸಿದ್ದು, ಉಳ್ಳವರಿಗೆ ಒಂದು ಕಾನೂನು ಬಡವರಿಗೆ ಒಂದು ಕಾನೂನು ಇದೆಯೇ ಎಂಬ ಪ್ರಶ್ನೆ ಮೂಡಿಸಿದೆ.
ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ-೨ ಸಿನಿಮಾ ಪ್ರದರ್ಶನದ ವೇಳೆ ಯಾವುದೇ ಮಾಹಿತಿ ನೀಡದೆ ಚಿತ್ರ ಮಂದಿರಕ್ಕೆ ಅಲ್ಲು ಅರ್ಜುನ್ ಏಕಾಏಕಿ ಭೇಟಿ ನೀಡಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ೯ ವರ್ಷದ ಮಗನೂ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಡಿ.೧೩ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆದರೆ ಉನ್ನತ ನ್ಯಾಯಾಲಯ ಆತನಿಗೆ ಅಂದೇ ಜಾಮೀನು ಮಂಜೂರು ಮಾಡಿತು. ಇಂತಹ ಪ್ರಕರಣಗಳನ್ನು ಗಮನಿಸಿದರೆ ನ್ಯಾಯಾಲಯಗಳ ಈ ಶೀಘ್ರ ತೀರ್ಪಿನ ಕ್ರಮ ಜನಸಾಮಾನ್ಯರ ಪ್ರಕರಣಗಳಲ್ಲಿ ಏಕಿಲ್ಲ ಎಂಬ ಪ್ರಶ್ನೆ ಮೂಡುತ್ತದೆ. ಜನಸಾಮಾನ್ಯರ ಪ್ರಕರಣಗಳು ನ್ಯಾಯಾಲಯಕ್ಕೆ ಬರುವುದೇ ತಡವಾಗುತ್ತದೆ. ಬಂದರೂ ಜಾಮೀನು ಸಿಗಲು ಅಥವಾ ಪ್ರಕರಣದ ತೀರ್ಪು ಹೊರಬರಲು ದಶಕವೇ ಬೇಕಾಗಬಹುದು. ಇನ್ನು ಮೃತ ಮಹಿಳೆಯ ಬಗ್ಗೆ ಕಿಂಚಿತ್ತೂ ಕರುಣೆ ತೋರದ ಅನೇಕ ರಾಜಕಾರಣಿಗಳು ಅಲ್ಲು ಅರ್ಜುನ್ ಪರವಾಗಿ ಮಾತನಾಡಿದ್ದು, ನಟನ ಬಂಧನವನ್ನು ಖಂಡಿಸಿದ್ದಾರೆ. ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಕೂಡ ರಾಷ್ಟ್ರ ಪ್ರಶಸ್ತಿ ಪಡೆದ ನಟನನ್ನು ಬಂಽಸಿರುವುದು ಪೊಲೀಸರ ಅಮಾನವೀಯ ನಡೆ ಎಂದಿದ್ದಾರೆ. ಇಂತಹ ಬೆಳವಣಿಗೆಗಳು ಜನಸಾಮಾನ್ಯರಿಗೆ ನ್ಯಾಯ ದೊರಕುತ್ತದೆ ಎಂಬ ಭರವಸೆಯನ್ನು ದೂರಾಗಿಸುತ್ತವೆ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…