ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು ಶಿವನ ಜ್ಞಾನವಾಪಿ’ ದೇವಾಲಯಗಳನ್ನು, ಮುಸ್ಲಿಮರು ಸ್ವಂತ ಇಚ್ಚೆಯಿಂದ ಹಿಂದೂಗಳಿಗೆ ಹಸ್ತಾಂತರಿಸುವುದರಿಂದ ಒಳ್ಳೆಯದಾಗಲಿದೆ ಎಂದು ಹೇಳಿರುವುದು ತುಂಬಾ ಶ್ಲಾಘನೀಯ ಸಂಗತಿ.
ಇದನ್ನೂ ಓದಿ: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು
ಮುಸ್ಲಿಮರಿಗಾಗಿ ಪ್ರತ್ಯೇಕ ದೇಶ ಸೃಷ್ಟಿಸಲು ಭಾರತವನ್ನು ವಿಭಜಿಸಿ, ಪಾಕಿಸ್ತಾನ ಭಾಗವನ್ನು ನೀಡಿದ ನಂತರವೂ ಭಾರತ ಜಾತ್ಯತೀತವಾಗಿಯೇ ಮುಂದುವರಿದಿದೆ. ಇದಕ್ಕೆ ಕಾರಣ ಭಾರತದಲ್ಲಿ ಹಿಂದೂಗಳು ಬಹು ಸಂಖ್ಯಾತರಾಗಿರುವುದು, ಇದನ್ನು ಮುಸ್ಲಿಮರು ಪ್ರಶಂಸೆ ಮಾಡಬೇಕು ಎಂದಿರುವುದು ಸ್ವಾಗತಾರ್ಹ ಮತ್ತು ಪ್ರಬುದ್ಧ ನಡೆ. ಭಾರತವೇನಾದರೂ ಮುಸ್ಲಿಂ ಬಹುಸಂಖ್ಯಾತ ದೇಶವಾಗಿದ್ದರೆ ಅದು ಎಂದಿಗೂ ಜಾತ್ಯತೀತ ದೇಶವಾಗಿ ಇರುತ್ತಿರಲಿಲ್ಲ. ಆದ್ದರಿಂದ ಈ ಸಂಗತಿಯನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ವಾಸ್ತವವನ್ನು ಹೇಳಿ ಗಮನ ಸೆಳೆದಿರುವುದು ಎಲ್ಲಾ ಭಾರತೀಯರು ಮೆಚ್ಚುವಂತಹ ಸಂಗತಿಯಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್ಪಿಜಿ ಸಿಲಿಂಡರ್ಗಳನ್ನು…
ಹೆಚ್.ಎಸ್. ದಿನೇಶ್ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…