ಓದುಗರ ಪತ್ರ
ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯ ಅಕ್ಕ ಪಕ್ಕದ ಪ್ರದೇಶಗಳಿಗೆ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಪೂರೈಕೆಗೆ ಪೈಪ್ಲೈನ್ ಅಳವಡಿಸಿ ಎರಡು ತಿಂಗಳುಗಳೇ ಕಳೆದಿದ್ದರೂ ಇನ್ನೂ ಕೂಡ ಕುಡಿಯುವ ನೀರು ಯಾರ ಮನೆಗೂ ಬಂದಿಲ್ಲ. ಕೇವಲ ಪೈಪ್ ಲೈನ್ ಅಳವಡಿಸಿರುವ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಕೆಲವು ಖಾಸಗಿ ಬಡಾವಣೆಗಳಿಗೆ ನೇರವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕಾನೂನುಬದ್ಧ ಲೇಔಟ್ಗಳ ನಿವಾಸಿಗಳಿಗೆ ಬೋರ್ವೆಲ್ ನೀರೇ ಗತಿಯಾಗಿದ್ದು, ಗಡುಸು ನೀರಿನಿಂದಾಗಿ ತೀವ್ರ ಸಮಸ್ಯೆಯಾಗುತ್ತಿದೆ.
ಬೋಗಾದಿ, ಕಾವೇರಿ ನಗರ, ಖಜಾನೆ ಲೇಔಟ್, ನ್ಯಾಯಾಂಗ ಬಡಾವಣೆಯಲ್ಲಿ ಸಾವಿರಾರು ನಿವಾಸಿಗಳು ಕಬಿನಿ ನೀರಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ ಈ ಬಗ್ಗೆ ತಕ್ಷಣ ಗಮನ ಹರಿಸಿ ಈ ಬಡಾವಣೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಸುರಭಿ ಭಟ್, ರೂಪ ನಗರ ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…