ಓದುಗರ ಪತ್ರ
ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯ ಅಕ್ಕ ಪಕ್ಕದ ಪ್ರದೇಶಗಳಿಗೆ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಪೂರೈಕೆಗೆ ಪೈಪ್ಲೈನ್ ಅಳವಡಿಸಿ ಎರಡು ತಿಂಗಳುಗಳೇ ಕಳೆದಿದ್ದರೂ ಇನ್ನೂ ಕೂಡ ಕುಡಿಯುವ ನೀರು ಯಾರ ಮನೆಗೂ ಬಂದಿಲ್ಲ. ಕೇವಲ ಪೈಪ್ ಲೈನ್ ಅಳವಡಿಸಿರುವ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಕೆಲವು ಖಾಸಗಿ ಬಡಾವಣೆಗಳಿಗೆ ನೇರವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕಾನೂನುಬದ್ಧ ಲೇಔಟ್ಗಳ ನಿವಾಸಿಗಳಿಗೆ ಬೋರ್ವೆಲ್ ನೀರೇ ಗತಿಯಾಗಿದ್ದು, ಗಡುಸು ನೀರಿನಿಂದಾಗಿ ತೀವ್ರ ಸಮಸ್ಯೆಯಾಗುತ್ತಿದೆ.
ಬೋಗಾದಿ, ಕಾವೇರಿ ನಗರ, ಖಜಾನೆ ಲೇಔಟ್, ನ್ಯಾಯಾಂಗ ಬಡಾವಣೆಯಲ್ಲಿ ಸಾವಿರಾರು ನಿವಾಸಿಗಳು ಕಬಿನಿ ನೀರಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ ಈ ಬಗ್ಗೆ ತಕ್ಷಣ ಗಮನ ಹರಿಸಿ ಈ ಬಡಾವಣೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಸುರಭಿ ಭಟ್, ರೂಪ ನಗರ ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…